ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ 
ದೇಶ

ನನ್ನ ಮೇಲೆ ದೈಹಿಕ ಹಲ್ಲೆಗೆ ಸಿಎಂ ಪಿಣರಾಯಿ ವಿಜಯನ್ ಸಂಚು: ಕೇರಳ ರಾಜ್ಯಪಾಲ ಗಂಭೀರ ಆರೋಪ

ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಸಿಎಂ ಪಿಣರಾಯಿ ವಿಜಯನ್ ಸಂಚು ರೂಪಿಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಕೊಚ್ಚಿನ್: ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಸಿಎಂ ಪಿಣರಾಯಿ ವಿಜಯನ್ ಸಂಚು ರೂಪಿಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಸದಸ್ಯರು ತಮ್ಮ ಮೇಲೆ ಕಪ್ಪು ಬಾವುಟ ಪ್ರದರ್ಶಿಸಿ ತೀವ್ರ ಪ್ರತಿಭಟನೆ ಮಾಡಿದ್ದ ಪ್ರಕರಣವನ್ನು ಪೂರ್ವ ನಿಯೋಜಿತ ಕೃತ್ಯ ಎಂದು ಕರೆದಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ವಿದ್ಯಾರ್ಥಿ ಸಂಘಟನೆಗಳ ಸೋಗಿನಲ್ಲಿರುವ ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿಶ್ವವಿದ್ಯಾನಿಲಯದ ಸೆನೆಟ್‌ಗಳನ್ನು "ಸಂಘ ಪರಿವಾರದ ವ್ಯಕ್ತಿಗಳಿಂದ" ತುಂಬಿದ್ದಾರೆ ಎಂದು ಆರೋಪಿಸಿ SFI ಸದಸ್ಯರು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕಪ್ಪು ಬಾವುಟ ಪ್ರದರ್ಶಿಸಿ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು. ಸೋಮವಾರ ರಾಜ್ಯಪಾಲ ಖಾನ್ ಅವರು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ, ಎಸ್‌ಎಫ್‌ಐ ಸದಸ್ಯರ ಗುಂಪು ಅವರಿಗೆ ಕಪ್ಪು ಬಾವುಟ ತೋರಿಸಿ, ಅವರ ಕಾರಿನ ಹತ್ತಿರ ಹೋಗಿ ಘೋಷಣೆಗಳನ್ನು ಕೂಗಿತು. 

ಈ ಪ್ರತಿಭಟನೆಯಿಂದ ಕೆರಳಿದ ಖಾನ್, ತಮ್ಮ ಕಾರಿಂದ ಕೆಳಗಿಳಿದು ಪ್ರತಿಭಟನಾಕಾರರ ಕಡೆಗೆ ನಡೆದು, "ರಕ್ತಪಾತಿಗಳೇ, ಬನ್ನಿ" ಎಂದು ಹೇಳಿದರು. ನಂತರ, ಪೊಲೀಸರ ಕಡೆಗೆ ತಿರುಗಿದ ಖಾನ್, “ಅವರು ನನ್ನ ಹತ್ತಿರ ಹೇಗೆ ಬಂದರು? ಇಲ್ಲಿ ಪೊಲೀಸ್ ಅಧಿಕಾರಿ ಯಾರು? ಅವರು (ಪ್ರತಿಭಟನಕಾರರು) ನನ್ನ ಕಾರಿಗೆ ಹೊಡೆಯುವ ಕ್ರಿಮಿನಲ್‌ಗಳು,'' ಎಂದು ಅವರು ಹೇಳಿದರು. 

ಇದೇ ವೇಳೆ ಘಟನೆಗೆ ಸಿಎಂ ಪಿಣರಾಯಿ ವಿಜಯನ್ ಅವರನ್ನುದೂಷಿಸಿದ ರಾಜ್ಯಪಾಲರು, “...ನಾನು ಕೆಳಗೆ ಇಳಿದಾಗ ಪೊಲೀಸರು ಅವರನ್ನು ಕಾರಿನಲ್ಲಿ ಕಳುಹಿಸಿದರು ಮತ್ತು ಅವರು ಓಡಿಹೋದರು. ಸಿಎಂ ನಿರ್ದೇಶನ ಮಾಡುತ್ತಿರುವಾಗ ದರಿದ್ರ ಪೊಲೀಸರು ಏನು ಮಾಡಲು ಸಾಧ್ಯ. ಸಿಎಂ ಪಿತೂರಿ ಮಾಡುತ್ತಿದ್ದಾರೆ. ಅವರು ನನ್ನನ್ನು ದೈಹಿಕವಾಗಿ ನೋಯಿಸಲು ಈ ಜನರನ್ನು ಕಳುಹಿಸುತ್ತಿದ್ದಾರೆ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ... ನನ್ನನ್ನು ದೈಹಿಕವಾಗಿ ನೋಯಿಸಲು ಪಿತೂರಿ ಮಾಡುವುದು ಮುಖ್ಯಮಂತ್ರಿಯ ಕೆಲಸವಲ್ಲ  ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT