ಸಾಂದರ್ಭಿಕ ಚಿತ್ರ 
ದೇಶ

ಪುದುಚೇರಿ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮಹಿಳಾ ಮೀಸಲಾತಿ ವಿಸ್ತರಿಸುವ 2 ಮಸೂದೆಗೆ ಲೋಕಸಭೆ ಅಂಗೀಕಾರ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಸಂವಿಧಾನ(106ನೇ ತಿದ್ದುಪಡಿ) ಕಾಯ್ದೆಯ ನಿಬಂಧನೆಗಳನ್ನು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಜಮ್ಮು-ಕಾಶ್ಮೀರ...

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಸಂವಿಧಾನ(106ನೇ ತಿದ್ದುಪಡಿ) ಕಾಯ್ದೆಯ ನಿಬಂಧನೆಗಳನ್ನು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆಗಳಿಗೆ ವಿಸ್ತರಿಸುವ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ(ಎರಡನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ(ತಿದ್ದುಪಡಿ) ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು, ಈ ಎರಡು ಮಸೂದೆಗಳು ಸಾರ್ವಜನಿಕ ಪ್ರತಿನಿಧಿಗಳಾಗಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಮತ್ತು ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಿದರು.

ಇದೇ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ರೈ, "ಅದು ಮೊಘಲರ ಆಳ್ವಿಕೆ, ಆಕ್ರಮಣಕಾರರ ಆಳ್ವಿಕೆ, ಬ್ರಿಟಿಷರ ಆಳ್ವಿಕೆ ಅಥವಾ ಕಾಂಗ್ರೆಸ್ ಸರ್ಕಾರಗಳು" ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಿದ್ದವು. ಅವರು ಮಹಿಳೆಯರು ಬೆಳೆಯಲು ಸೂಕ್ತ ಅವಕಾಶ ನೀಡಲಿಲ್ಲ ಮತ್ತು ಅವರಿಂದ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದರು.

ಆರ್ಟಿಕಲ್ 370 ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧವಾ ಪಿಂಚಣಿಯು ಶೇ. 100 ರಷ್ಟು ಫಲಾನುಭವಿಗಳಿಗೆ ತಲುಪಿದೆ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರತಿಯೊಂದು ಜಿಲ್ಲೆಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ ಒನ್-ಸ್ಟಾಪ್ ಸೆಂಟರ್ ಸ್ಕೀಮ್ ಬಂದಿವೆ ಎಂದು ರೈ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT