ಮುಂಬೈ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಕುರಿತು ಎಸ್ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ರಾಜ್ಯ ಸರ್ಕಾರ ಮಂಗಳವಾರ ಆದೇಶಿಸಿದೆ.
ಸಾಲಿಯಾನ್ ಸಾವಿನ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗುವುದು ಎಂದು ಕಳೆದ ವರ್ಷ ಡಿಸೆಂಬರ್ನಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ದಿಶಾ ಸಾಲಿಯಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷದ ಅಕ್ಟೋಬರ್ನಲ್ಲಿ ಬಿಜೆಪಿ ನಾಯಕ ನಿತೀಶ್ ರಾಣೆ ಅವರು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಅವರನ್ನು ಗುರಿಯಾಗಿಸಿಕೊಂಡಿದ್ದರು. ಈ ಪ್ರಕರಣಕ್ಕೆ ತಮ್ಮ ಮಗನ ಹೆಸರಿಗೆ ಸಂಬಂಧವಿದೆಯೇ ಎಂದು ಅವರ ತಂದೆ ಮತ್ತು ಶಿವಸೇನೆಯ ಹಿರಿಯ ನಾಯಕ ಉದ್ಧವ್ ಠಾಕ್ರೆ ಹೇಳಬೇಕು ಎಂದು ಅವರು ಒತ್ತಾಯಿಸಿದ್ದರು.
ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾಗೆ ಇದು 'ದೊಡ್ಡ ಗೆಲುವು', ಆಕೆ ನಟ ಸುಶಾಂತ್, ನಟಿ ಪರ್ವೀನ್ರಂತೆ ಆಗಲಿಲ್ಲ: ಅಪೂರ್ವ ಅಸ್ರಾನಿ
ಮುಂಬೈನ ಮಲಾಡ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಿಂದ ಬಿದ್ದು ಸಾಲಿಯಾನ್ 2020ರ ಜೂನ್ 8ರಂದು ಸಾವನ್ನಪ್ಪಿದ್ದರು. ಇದಾದ ಒಂದು ವಾರದ ನಂತರ, ಸುಶಾಂತ್ ಸಿಂಗ್ ರಜಪೂತ್ ಅವರ ನಿವಾಸದ ಸೀಲಿಂಗ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮುಂಬೈ ಪೊಲೀಸರು ಈ ಪ್ರಕರಣದಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದರು.