ರಾಯ್ಪುರದಲ್ಲಿ ನಿಯೋಜಿತ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಛತ್ತೀಸ್‌ಗಢದ ರಾಜ್ಯಪಾಲ ಬಿಸ್ವಭೂಷಣ ಹರಿಚಂದನ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇತರರೊಂದಿಗೆ. (ಫೋಟೋ- ಪಿಟಿಐ) 
ದೇಶ

ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ ಸೇರಿ ಹಲವರು ಭಾಗಿ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಕುಂಕುರಿ ಕ್ಷೇತ್ರದ ಶಾಸಕ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮತ್ತು ಶಾಸಕ ವಿಜಯ್ ಶರ್ಮಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಯ್ಪುರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಕುಂಕುರಿ ಕ್ಷೇತ್ರದ ಶಾಸಕ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಅರುಣ್ ಸಾವೊ ಮತ್ತು ಶಾಸಕ ವಿಜಯ್ ಶರ್ಮಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಛತ್ತೀಸಗಢದ ರಾಜ್ಯಪಾಲ ಬಿಸ್ವಭೂಷಣ ಹರಿಚಂದನ್ ಅವರು ಸಾಯಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಮತ್ತು ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿಷ್ಣು ದೇವ್ ಸಾಯಿ

59 ವರ್ಷದ ವಿಷ್ಣು ದೇವ್ ಸಾಯಿ ಅವರು 2020 ರಲ್ಲಿ ರಚಿಸಲಾದ ಛತ್ತೀಸ್‌ಗಢ ರಾಜ್ಯದ ನಾಲ್ಕನೇ ಮುಖ್ಯಮಂತ್ರಿಯಾಗಿದ್ದಾರೆ. ಅರುಣ್ ಸಾವೊ (54) ಅವರು ಪ್ರಭಾವಿ ಸಾಹು (ತೆಲಿ) ಒಬಿಸಿ ಸಮುದಾಯದಿಂದ ಬಂದವರು. ವಿಜಯ್ ಶರ್ಮಾ (50) ಅವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT