ರಾಕೇಶ್ ಟಿಕಾಯತ್ 
ದೇಶ

ಲೋಕಸಭೆಗೆ ನುಗ್ಗಿದ ಆರೋಪಿಗಳಿಗೂ ಎಸ್ ಕೆಎಂ, ಬಿಕೆಯುಗೂ ಯಾವುದೇ ಸಂಬಂಧ ಇಲ್ಲ: ರಾಕೇಶ್ ಟಿಕಾಯತ್

ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದನ್ನು ಖಂಡಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರು, ಮಾಧ್ಯಮದ ಒಂದು ವಿಭಾಗ ವರದಿ ಮಾಡಿದಂತೆ ಆರೋಪಿಗಳೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಅಥವಾ...

ನವದೆಹಲಿ: ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪವಾಗಿದ್ದನ್ನು ಖಂಡಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರು, ಮಾಧ್ಯಮದ ಒಂದು ವಿಭಾಗ ವರದಿ ಮಾಡಿದಂತೆ ಆರೋಪಿಗಳೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ಅಥವಾ ಭಾರತೀಯ ಕಿಸಾನ್ ಯೂನಿಯನ್‌(ಬಿಕೆಯು) ಯಾವುದೇ ಸಂಬಂಧ ಹೊಂದಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು, ನಿರುದ್ಯೋಗದಂತಹ ಸಮಸ್ಯೆಗಳಿಂದ ಆಕ್ರೋಶಗೊಂಡು ಈ ಕೃತ್ಯ ಎಸಗಿರುವುದಾಗಿ ಬಂಧಿತ ಆರೋಪಿ ಅಮೋಲ್ ಶಿಂಧೆ ಪೊಲೀಸರ ವಿಚಾರಣೆ ವೇಳೆ ಹೇಳಿರುವುದಾಗಿ ಮೂಲವೊಂದು ಪಿಟಿಐಗೆ ತಿಳಿಸಿದೆ.

ಮತ್ತೋರ್ವ ಆರೋಪಿ ನೀಲಂ ಈ ಹಿಂದೆ ರೈತರ ಪ್ರತಿಭಟನೆ ಸೇರಿದಂತೆ ಹಲವು ಆಂದೋಲನಗಳಲ್ಲಿ ಭಾಗವಹಿಸಿದ್ದರು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ.

ಹೀಗಾಗಿ ಈ ಬಗ್ಗೆ ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಟಿಕಾಯತ್ ಅವರು, 'ಇಂದು ಸಂಸತ್ತಿನಲ್ಲಿ ನಡೆದ ಘಟನೆ ಅತ್ಯಂತ ಖಂಡನೀಯ. ಸಂಯುಕ್ತ ಕಿಸಾನ್ ಮೋರ್ಚಾ ಹೆಸರಿನಲ್ಲಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಸಂಪೂರ್ಣ ಆಧಾರ ರಹಿತ. SKM ಅಥವಾ BKU ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT