ಲೋಕಸಭೆ 
ದೇಶ

ಕಲಾಪಕ್ಕೆ ಅಡ್ಡಿಪಡಿಸಿದ ಆರೋಪ: ಲೋಕಸಭೆಯಿಂದ ವಿಪಕ್ಷಗಳ ಒಟ್ಟು 15 ಸಂಸದರು ಅಮಾನತು!

ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲೋಕಸಭೆಯಿಂದ ಒಟ್ಟು 15 ಸಂಸದರನ್ನು ಅಮಾನತುಗೊಳಿಸಲಾಗಿದೆ.

ನವದೆಹಲಿ: ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲೋಕಸಭೆಯಿಂದ ಒಟ್ಟು 15 ಸಂಸದರನ್ನು ಅಮಾನತುಗೊಳಿಸಲಾಗಿದೆ.

ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳುವವರೆಗೆ 15 ಸಂಸದರನ್ನು ಅಮಾನತುಗೊಳಿಸಲಾಗಿದೆ. ಲೋಕಸಭೆಯ 14 ಸಂಸದರು ರಾಜ್ಯಸಭೆಯ ಓರ್ವ ಸಂಸದನನ್ನು ಅಮಾನತುಗೊಳಿಸಲಾಗಿದೆ.
 
ಸಂಸತ್ ನ ಭದ್ರತಾ ಉಲ್ಲಂಘನೆ ವಿಷಯವಾಗಿ ಈ ಸಂಸದರು ಕೋಲಾಹಲ ಉಂಟುಮಾಡಿ ಸುಗಮ ಕಲಾಪಕ್ಕೆ ಅಡ್ಡಿ ಉಂಟುಮಾಡಿದ್ದರು. ಅಶಿಸ್ತಿನ ನಡವಳಿಕೆಯ ಕಾರಣ ನೀಡಿ ಈ ಸಂಸದರನ್ನು ಸಸ್ಪೆಂಡ್ ಮಾಡಲಾಗಿದೆ. 

ಕನಿಮೋಳಿ, ಮಾಣಿಕಂ ಟ್ಯಾಗೋರ್, ಪಿಆರ್ ನಟರಾಜನ್, ವಿಕೆ ಶ್ರೀಕಂಠಂ, ಬೇನಿ ಬಹನ್, ಕೆ ಸುಬ್ರಮಣ್ಯಂ, ಎಸ್‌ಆರ್ ಪ್ರತಿಬನ್, ಎಸ್ ವೆಂಕಟೇಶನ್, ಮೊಹಮ್ಮದ್ ಜಾವೇದ್, ಟಿಎನ್ ಪ್ರತಾಪನ್, ಹೈಬಿ ಈಡನ್, ಎಸ್ ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಅಮಾನತುಗೊಂಡ ಸಂಸದರಾಗಿದ್ದಾರೆ. 

ಡಿ.13 ರಂದು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸಭಾಂಗಣಕ್ಕೆ ಜಿಗಿದ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಎಂಬ ಇಬ್ಬರು ವ್ಯಕ್ತಿಗಳಿಂದ ಉಂಟಾದ ಭದ್ರತಾ ಲೋಪವನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಕೋಲಾಹಲ ಸೃಷ್ಟಿಸಿ ಪ್ರತಿಭಟಿಸಿದ್ದರಿಂದ ಗುರುವಾರ ಲೋಕಸಭೆ ಕಲಾಪಕ್ಕೆ ಅಡ್ಡಿಯಾಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ-Video

ಜಾರ್ಖಂಡ್‌ ಸಮೀಪ ಚಾತ್ರಾದಲ್ಲಿ ಪತನಗೊಂಡ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್: ಎಲ್ಲಾ 7 ಮಂದಿ ಸಾವು-Video

Road Rage Shocker: ಕ್ಷುಲ್ಲಕ ಜಗಳ, ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ, ಓರ್ವ ಸಾವು, ಹಲವರಿಗೆ ಗಾಯ

CM ಪಟ್ಟ ಜಟಾಪಟಿ: ಮತ್ತಷ್ಟು ಹರಿತವಾಯ್ತು ದಲಿತ ಸಿಎಂ ಅಸ್ತ್ರ, DKS ವಿರುದ್ಧ ಸಿದ್ದು ಬಣ ಪ್ರತಿತಂತ್ರ..!

ರಂಜಾನ್, ಹೋಳಿ ಹಬ್ಬ: ಶಾಂತಿ ಕದಡಿದರೆ ಕಠಿಣ ಕ್ರಮ, ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಖಡಕ್ ಸೂಚನೆ

SCROLL FOR NEXT