ಲೋಕಸಭಾ ಕಲಾಪ 
ದೇಶ

ಸಂಸತ್ ಕಲಾಪ: ಡರೆಕ್ ಒಬ್ರಿಯಾನ್ ಬೆನ್ನಲ್ಲೇ 5 ಲೋಕಸಭಾ ಸದಸ್ಯರ ಅಮಾನತು

ಲೋಕಸಭೆ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಇದೀಗ ಡರೆಕ್ ಒಬ್ರಿಯಾನ್ ಬೆನ್ನಲ್ಲೇ ಲೋಕಸಭೆಯ 5 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

ನವದೆಹಲಿ: ಲೋಕಸಭೆ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಇದೀಗ ಡರೆಕ್ ಒಬ್ರಿಯಾನ್ ಬೆನ್ನಲ್ಲೇ ಲೋಕಸಭೆಯ 5 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಸ್ಪೀಕರ್ ಹೆಸರಿಸಿದ ನಂತರ ಲೋಕಸಭೆಯು ಐವರು ಕಾಂಗ್ರೆಸ್ ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಗದ್ದಲದ ನಡುವೆಯೇ ಐವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. "ಈ ಸದನವು ಟಿ ಎನ್ ಪ್ರತಾಪನ್, ಹೈಬಿ ಈಡನ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಕಸ್ ಅವರ ದುರ್ವರ್ತನೆ ಮೇರೆಗೆ ಹಾಲಿ ಅಧಿವೇಶನದ ಬಾಕಿ ಕಲಾಪಗಳಿಂದ ಅಮಾನತು ಮಾಡಲಾಗಿದೆ ಎಂದು ನಿರ್ಣಯವನ್ನು ಓದಲಾಯಿತು. ಬಿ ಮಹತಾಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಭದ್ರತಾ ಲೋಪದ ಹಿನ್ನೆಲೆಯಲ್ಲಿ ಅಮಿತ್ ಶಾ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿ ಗದ್ದಲವೇರ್ಪಡಿಸಿದ ನಂತರ ಲೋಕಸಭೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT