ಸಾಂದರ್ಭಿಕ ಚಿತ್ರ 
ದೇಶ

ತಪ್ಪು ಗುರುತು ಪ್ರಕರಣ: ಡಿಎಂಕೆ ಸಂಸದ ಪಾರ್ತಿಬನ್ ಅಮಾನತು ಹಿಂಪಡೆದ ಸ್ಪೀಕರ್

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪಟ್ಟು ಹಿಡಿದು, ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರತಿಪಕ್ಷಗಳ 15 ಸಂಸದರನ್ನು...

ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಪಟ್ಟು ಹಿಡಿದು, ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರತಿಪಕ್ಷಗಳ 15 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಆದರೆ ಡಿಎಂಕೆ ಸಂಸದ ಎಸ್.ಆರ್. ಪಾರ್ತಿಬನ್ ಅವರು ಕಲಾಪಕ್ಕೆ ಹಾಜರಾಗದಿದ್ದರೂ ಅವರನ್ನು ಅಮಾನತು ಮಾಡಲಾಗಿದೆ ಎಂದು ಹಲವು ಸಂಸದರು ದೂರಿದರು.

ಇತರರು ಕಲಾಪಕ್ಕೆ ಅಡ್ಡಿಪಡಿಸಿದಾಗ ಸದಸ್ಯರು ಸದನದಲ್ಲಿ ಹಾಜರಿರದಿದ್ದರೂ ಅವರನ್ನು ತಪ್ಪಾಗಿ ಗುರುತಿಸಿ ಅಮಾನತು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ, ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಸಲ್ಲಿಸಿದ ನಂತರ ಡಿಎಂಕೆ ಸಂಸದ ಎಸ್‌ಆರ್ ಪಾರ್ತಿಬನ್ ಅವರ ಅಮಾನತು ಕ್ರಮವನ್ನು ಲೋಕಸಭೆ ಹಿಂಪಡೆದಿದೆ.

ಈಗ, ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಂಡಿರುವ ಒಟ್ಟು ಸಂಸದರ ಸಂಖ್ಯೆ 14ಕ್ಕೆ ಇಳಿದಿದೆ.

ಸದಸ್ಯರನ್ನು ಗುರುತಿಸುವಲ್ಲಿ ಸಿಬ್ಬಂದಿಯ ಕಡೆಯಿಂದ ತಪ್ಪಾಗಿರುವ ಕಾರಣ ಪಾರ್ತಿಬನ್ ಅವರ ಹೆಸರನ್ನು ಅಮಾನತುಗೊಳಿಸಿದ ಲೋಕಸಭಾ ಸದಸ್ಯರ ಪಟ್ಟಿಯಿಂದ ಹಿಂಪಡೆಯಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ. 

ತಪ್ಪಾದ ಗುರುತಿನ ಪ್ರಕರಣವಾಗಿರುವುದರಿಂದ ಸದಸ್ಯರ ಹೆಸರನ್ನು ಕೈಬಿಡುವಂತೆ ಸ್ಪೀಕರ್‌ಗೆ ಮನವಿ ಮಾಡಿದ್ದೇನೆ ಮತ್ತು ಅಮಾನತು ಹಿಂಪಡೆಯಲು ಸ್ಪೀಕರ್ ಒಪ್ಪಿಗೆ ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಿನಿಯಾಪೊಲಿಸ್ ಶೂಟಿಂಗ್: ICE ಅಧಿಕಾರಿಗಳಿಂದ ಗುಂಡಿಟ್ಟು ಮಹಿಳೆ ಹತ್ಯೆ, ‘ಸ್ವಯಂರಕ್ಷಣೆ ಕ್ರಮ’ ಎಂದು ಟ್ರಂಪ್ ಸಮರ್ಥನೆ

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ'- ಅಮೆರಿಕ ವಾಣಿಜ್ಯ ಕಾರ್ಯದರ್ಶಿ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ

ಬಳ್ಳಾರಿ ಆಳಲು ಹೊರಟ ಪಾಳೇಗಾರರ ಮಧ್ಯೆ ವಿಜೃಂಭಿಸಿದ ಗನ್ ಸಂಸ್ಕೃತಿ (ನೇರ ನೋಟ)

ಮನ್ರೇಗಾ ಯೋಜನೆ ಮರು ಜಾರಿಗೆ ಆಗ್ರಹ: ಕೇಂದ್ರದ ವಿರುದ್ಧ ಸಿಡಿದೆದ್ದ ರಾಜ್ಯ ಸರ್ಕಾರ, ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಶೇಷ ಅಧಿವೇಶನ ಕರೆಯಲು ನಿರ್ಧಾರ

SCROLL FOR NEXT