ರಾಘವ್ ಚಡ್ಡಾ 
ದೇಶ

ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ

ಆಮ್ ಆದ್ಮಿ ಪಕ್ಷವು ಸಂಜಯ್ ಸಿಂಗ್ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಆಮ್ ಆದ್ಮಿ ಪಕ್ಷವು ಸಂಜಯ್ ಸಿಂಗ್ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಿಗೆ ಎಎಪಿ ಮುಖ್ಯಸ್ಥರು ಪತ್ರ ಬರೆದಿದ್ದು, ಆರೋಗ್ಯ ಸಮಸ್ಯೆ ಹೊಂದಿರುವ ಸಂಜಯ್ ಸಿಂಗ್ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಲಿದ್ದಾರೆ ಎಂದು ಹೇಳಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಚಡ್ಡಾ ಅವರನ್ನು ನಾಯಕನ್ನಾಗಿ ನೇಮಿಸುವ ಕುರಿತು ಎಎಪಿಯಿಂದ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.

ಚಡ್ಡಾ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಬಲವನ್ನು ಹೊಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!