ರಾಘವ್ ಚಡ್ಡಾ 
ದೇಶ

ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ರಾಘವ್ ಚಡ್ಡಾ ನೇಮಕ

ಆಮ್ ಆದ್ಮಿ ಪಕ್ಷವು ಸಂಜಯ್ ಸಿಂಗ್ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಆಮ್ ಆದ್ಮಿ ಪಕ್ಷವು ಸಂಜಯ್ ಸಿಂಗ್ ಬದಲಿಗೆ ತನ್ನ ಸಂಸದ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕನ್ನಾಗಿ ನೇಮಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ರಾಜ್ಯಸಭಾ ಅಧ್ಯಕ್ಷರಿಗೆ ಎಎಪಿ ಮುಖ್ಯಸ್ಥರು ಪತ್ರ ಬರೆದಿದ್ದು, ಆರೋಗ್ಯ ಸಮಸ್ಯೆ ಹೊಂದಿರುವ ಸಂಜಯ್ ಸಿಂಗ್ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಲಿದ್ದಾರೆ ಎಂದು ಹೇಳಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಚಡ್ಡಾ ಅವರನ್ನು ನಾಯಕನ್ನಾಗಿ ನೇಮಿಸುವ ಕುರಿತು ಎಎಪಿಯಿಂದ ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ.

ಚಡ್ಡಾ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಬಲವನ್ನು ಹೊಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT