ಲೋಕಸಭೆಯಲ್ಲಿ ಹಳದಿ ಸ್ಮೋಕ್ ಬಿಟ್ಟ ಸಂದರ್ಭ 
ದೇಶ

ಲೋಕಸಭೆ ಚುನಾವಣೆಯಲ್ಲಿ ಮಗನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಷಡ್ಯಂತ್ರ: ಲೆಹರ್ ಸಿಂಗ್

ಲೋಕಸಭೆಯೊಳಗೆ ನುಗ್ಗಿ ಭದ್ರತೆ ಉಲ್ಲಂಘನೆ ಮಾಡಿರುವ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಹೆಸರಲ್ಲಿ ಸಂಸತ್ತು ಪ್ರವೇಶಿಸಲು ಪಾಸ್ ತೆಗೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಸಂಸದರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.

ನವದೆಹಲಿ: ಲೋಕಸಭೆಯೊಳಗೆ ನುಗ್ಗಿ ಭದ್ರತೆ ಉಲ್ಲಂಘನೆ ಮಾಡಿರುವ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಹೆಸರಲ್ಲಿ ಸಂಸತ್ತು ಪ್ರವೇಶಿಸಲು ಪಾಸ್ ತೆಗೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಸಂಸದರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರನ್ನು ವಿಚಾರಣೆಗೊಳಪಡಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಈ ಬಗ್ಗೆ ಇಂದು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ, ಈ ಪ್ರಕರಣದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ನಾಯಕರು ಬೇಕೆಂದೇ ಷಡ್ಯಂತ್ರ ನಡೆಸಿದ್ದಾರೆ.  ಮೈಸೂರು ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರನ್ನು ಕಣಕ್ಕಿಳಿಸುವ ಮಾತುಗಳು ಕೇಳಿಬರುತ್ತಿವೆ. ಇದನ್ನೇ ಮುಂದಿಟ್ಟುಕೊಂಡು ಸಂಸತ್ ಮೇಲೆ ಸ್ಮೋಕ್ ಬಾಂಬ್ ದಾಳಿ ಮಾಡಿಸಿ ಮಗನನ್ನು ಗೆಲ್ಲಿಸಲು ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡಲಾಗಿದೆ. ಮೈಸೂರಿನಲ್ಲಿ ಸಿದ್ದರಾಮಯ್ಯ ಮಗ ಲೋಕಸಭೆಗೆ ಸ್ಪರ್ಧೆ ಮಾಡಲಿದ್ದಾರೆ. ಹೀಗಾಗಿ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಮಗನನ್ನು ಗೆಲ್ಲಿಸಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಭಾರತ್ ಜೋಡೊ ಯಾತ್ರೆಯಲ್ಲಿ ಅರ್ಬನ್ ನಕ್ಸಲ್ಸ್ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ. ಸಂಸತ್​ನಲ್ಲಿ ಗಲಾಟೆಯಾದ 15 ನಿಮಿಷದಲ್ಲೇ ಕಾಂಗ್ರೆಸ್​ನವರು ಪ್ರತಿಭಟನೆ ಮಾಡಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಇದರಿಂದಲೇ ಗೊತ್ತಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT