ಅಮಿತ್ ಶಾ 
ದೇಶ

ಸಂಸತ್ತು ಭದ್ರತೆ ಉಲ್ಲಂಘನೆ ಪ್ರಕರಣ ಗಂಭೀರ, ಆದರೆ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು: ಅಮಿತ್ ಶಾ

ಲೋಕಸಭೆಯಲ್ಲಿ ಮೊನ್ನೆ ಬುಧವಾರ ನಡೆದ ಭದ್ರತಾ ಲೋಪವು ಗಂಭೀರ ಪ್ರಕರಣವಾಗಿದೆ ಎಂದು ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯ ತನಿಖೆಗಾಗಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು 15-20 ದಿನಗಳಲ್ಲಿ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ಮೊನ್ನೆ ಬುಧವಾರ ನಡೆದ ಭದ್ರತಾ ಲೋಪವು ಗಂಭೀರ ಪ್ರಕರಣವಾಗಿದೆ ಎಂದು ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯ ತನಿಖೆಗಾಗಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು 15-20 ದಿನಗಳಲ್ಲಿ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಆದರೆ, ಪ್ರತಿಪಕ್ಷಗಳು ಈ ಘಟನೆಯನ್ನು ರಾಜಕೀಯಗೊಳಿಸಬಾರದು. ಭದ್ರತಾ ಲೋಪ ಗಂಭೀರ ವಿಷಯ. ಲೋಕಸಭೆ ಸ್ಪೀಕರ್ ಇದನ್ನು ಮನಗಂಡಿದ್ದಾರೆ. ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ನಾನು ಉಲ್ಲಂಘನೆಯನ್ನು ನಿರಾಕರಿಸುವುದಿಲ್ಲ, ಇದು ಉಲ್ಲಂಘನೆಯಾಗಿದ್ದು, ಖಂಡಿತಾ ಗಂಭೀರ ಪ್ರಕರಣ, ಆದರೆ ಅದನ್ನು ರಾಜಕೀಯಗೊಳಿಸಬಾರದು ಎಂದು ಕೇಳಿಕೊಂಡರು. 

ಲೋಕಸಭೆಯ ಭದ್ರತೆ ಸ್ಪೀಕರ್ ಅವರ ಅಧೀನದಲ್ಲಿದೆ ಎಂಬುದು ಎಲ್ಲರಿಗೂ ಗೊತ್ತು. ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದು, ನಾವು ದೇಶದ ಹಿರಿಯ ಡಿಜಿಪಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೇವೆ. ಇತರ ಏಜೆನ್ಸಿಗಳ ಪ್ರತಿನಿಧಿಗಳು ಸಹ ಸಮಿತಿಯ ಭಾಗವಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸ್ಪೀಕರ್‌ಗೆ ವರದಿ ಬರಲಿದೆ. ಸ್ಪೀಕರ್ ವರದಿಯನ್ನು ಬಿಡುಗಡೆ ಮಾಡಿದರೆ ಅದು ಸೂಕ್ತ ಎಂದು ನಾನು ಭಾವಿಸುತ್ತೇನೆ ಎಂದು ಅಮಿತ್ ಶಾ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT