ಅಮಿತ್ ಶಾ 
ದೇಶ

ಸಂಸತ್ತು ಭದ್ರತೆ ಉಲ್ಲಂಘನೆ ಪ್ರಕರಣ ಗಂಭೀರ, ಆದರೆ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು: ಅಮಿತ್ ಶಾ

ಲೋಕಸಭೆಯಲ್ಲಿ ಮೊನ್ನೆ ಬುಧವಾರ ನಡೆದ ಭದ್ರತಾ ಲೋಪವು ಗಂಭೀರ ಪ್ರಕರಣವಾಗಿದೆ ಎಂದು ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯ ತನಿಖೆಗಾಗಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು 15-20 ದಿನಗಳಲ್ಲಿ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ಮೊನ್ನೆ ಬುಧವಾರ ನಡೆದ ಭದ್ರತಾ ಲೋಪವು ಗಂಭೀರ ಪ್ರಕರಣವಾಗಿದೆ ಎಂದು ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯ ತನಿಖೆಗಾಗಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು 15-20 ದಿನಗಳಲ್ಲಿ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಆದರೆ, ಪ್ರತಿಪಕ್ಷಗಳು ಈ ಘಟನೆಯನ್ನು ರಾಜಕೀಯಗೊಳಿಸಬಾರದು. ಭದ್ರತಾ ಲೋಪ ಗಂಭೀರ ವಿಷಯ. ಲೋಕಸಭೆ ಸ್ಪೀಕರ್ ಇದನ್ನು ಮನಗಂಡಿದ್ದಾರೆ. ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ನಾನು ಉಲ್ಲಂಘನೆಯನ್ನು ನಿರಾಕರಿಸುವುದಿಲ್ಲ, ಇದು ಉಲ್ಲಂಘನೆಯಾಗಿದ್ದು, ಖಂಡಿತಾ ಗಂಭೀರ ಪ್ರಕರಣ, ಆದರೆ ಅದನ್ನು ರಾಜಕೀಯಗೊಳಿಸಬಾರದು ಎಂದು ಕೇಳಿಕೊಂಡರು. 

ಲೋಕಸಭೆಯ ಭದ್ರತೆ ಸ್ಪೀಕರ್ ಅವರ ಅಧೀನದಲ್ಲಿದೆ ಎಂಬುದು ಎಲ್ಲರಿಗೂ ಗೊತ್ತು. ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದು, ನಾವು ದೇಶದ ಹಿರಿಯ ಡಿಜಿಪಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೇವೆ. ಇತರ ಏಜೆನ್ಸಿಗಳ ಪ್ರತಿನಿಧಿಗಳು ಸಹ ಸಮಿತಿಯ ಭಾಗವಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸ್ಪೀಕರ್‌ಗೆ ವರದಿ ಬರಲಿದೆ. ಸ್ಪೀಕರ್ ವರದಿಯನ್ನು ಬಿಡುಗಡೆ ಮಾಡಿದರೆ ಅದು ಸೂಕ್ತ ಎಂದು ನಾನು ಭಾವಿಸುತ್ತೇನೆ ಎಂದು ಅಮಿತ್ ಶಾ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT