ಸಾಂದರ್ಭಿಕ ಚಿತ್ರ 
ದೇಶ

ಅಕ್ರಮ ಹಣ ವರ್ಗಾವಣೆ: ಇಡಿಯಿಂದ ಮಧುರೈ ಸಂಸ್ಥೆಯ ರೂ. 207 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಮಧುರೈ ಮೂಲದ ಸಂಸ್ಥೆಯೊಂದು ನಡೆಸಿದ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ತಮಿಳುನಾಡಿನಲ್ಲಿರುವ ಅದರ 207 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಭಾನುವಾರ ತಿಳಿಸಿದೆ.

ಮಧುರೈ: ಮಧುರೈ ಮೂಲದ ಸಂಸ್ಥೆಯೊಂದು ನಡೆಸಿದ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ತಮಿಳುನಾಡಿನಲ್ಲಿರುವ ಅದರ 207 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಭಾನುವಾರ ತಿಳಿಸಿದೆ. ಈ ಸಂಬಂಧ ತಮಿಳುನಾಡು ಪೊಲೀಸರ ಆರ್ಥಿಕ ಅಪರಾಧ ವಿಭಾಗ ದಾಖಲಿಸಿದ ಎಫ್‌ಐಆರ್‌ನಿಂದ ಇಡಿ ತನಿಖೆ ನಡೆಸುತ್ತಿದೆ. 

ನಿಯೋಮ್ಯಾಕ್ಸ್ ಪ್ರಾಪರ್ಟೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಸಮೂಹ ಕಂಪನಿಗಳ ವಿರುದ್ಧ ಹೂಡಿಕೆದಾರರು ದೂರು ದಾಖಲಿಸಿದ ನಂತರ ಪೊಲೀಸ್ ಎಫ್‌ಐಆರ್ ದಾಖಲಿಸಲಾಗಿದೆ. ಹೆಚ್ಚಿನ ಆದಾಯದ ಭರವಸೆಯೊಂದಿಗೆ ಶೇ.12 ರಿಂದ 13ರಷ್ಟು ಬಡ್ಡಿಯೊಂದಿಗೆ ವಿವಿಧ ಯೋಜನೆಗಳಲ್ಲಿ (ಪ್ಲಾಟ್ ಅಭಿವೃದ್ಧಿ) ಜನರಿಂದ ಲಕ್ಷಾಂತರ ಹಣ ಪೀಕಿಸಿ ನಂತರ ವಂಚಿಸಿದ್ದಾರೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. 

ಕಂಪನಿ ಮತ್ತು ಅದರ ಪ್ರವರ್ತಕರು ನೀಡಿದ್ದ ಭರವಸೆವನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಸಾರ್ವಜನಿಕರಿಂದ ನೂರಾರು ಕೋಟಿಗಳಷ್ಟು ಹಣವನ್ನು ಸಂಗ್ರಹಿಸಿರುವ ಕಂಪನಿ, ನಂತರ ಆ  ಆ ಹಣವನ್ನು ತನ್ನ ಇತರ  ಕಂಪನಿಗಳು ಮತ್ತು ಇತರ ಘಟಕಗಳಿಗೆ ವರ್ಗಾಯಿಸುವ ಮೂಲಕ ಮೋಸ ಮಾಡಿದೆ ಎಂದು ಇಡಿ ಹೇಳಿದೆ.

ಅಪರಾಧದ ಮರೆಮಾಚಲು ಗುಂಪು ತನ್ನ ಖಾತೆಗಳ ಪುಸ್ತಕಗಳಲ್ಲಿ ತಿರುಚಲಾಗಿದೆ ಮತ್ತು ಕಂಪನಿಯ ಆಡಿಟರ್ ಹೇಳಿಕೆಯಲ್ಲಿ ಇದನ್ನು ಒಪ್ಪಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT