ಹೆಚ್.ಡಿ. ದೇವೇಗೌಡರಿಗೆ ಆಹ್ವಾನ 
ದೇಶ

ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರಿಗೆ ಆಹ್ವಾನ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ.  2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. 

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್.ಡಿ. ದೇವೇಗೌಡ, ರಾಮ ಮಂದಿರ ಕಟ್ಟಡ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಹಿರಿಯ ಆರ್‌ಎಸ್‌ಎಸ್ ನಾಯಕ ರಾಮ್ ಲಾಲ್ ಮತ್ತು ಹಿರಿಯ ವಿಎಚ್‌ಪಿ ನಾಯಕ  ಅಲೋಕ್ ಕುಮಾರ್ ಅವರಿಂದು ನನ್ನನ್ನು ನವದೆಹಲಿಯ ನನ್ನ ನಿವಾಸದಲ್ಲಿ ಭೇಟಿಯಾದರು ಎಂದು ತಿಳಿಸಿದ್ದಾರೆ. 

ಮುಂದಿನ ವರ್ಷದ ಜನವರಿ 22 ರಂದು ಪ್ರಧಾನ ಮಂತ್ರಿ ನಂರೇಂದ್ರ ಮೋದಿ ಅವರು ಇತರ ಗಣ್ಯರ ಸಮ್ಮುಖದಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸೇರಿದಂತೆ ರಾಜ್ಯದ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಆಗಸ್ಟ್ 5, 2020 ರಂದು, ಪ್ರಧಾನಿ ಮೋದಿ ಅವರು ದೇವಾಲಯದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ರಾಮ ಮಂದಿರದ ಸಮೀಪವಿರುವ 70 ಎಕರೆ ಪ್ರದೇಶದಲ್ಲಿ ವಾಲ್ಮೀಕಿ, ಕೇವತ್, ಶಬರಿ, ಜಟಾಯು, ಸೀತಾ, ಗಣೇಶ ಮತ್ತು ಶೇಷಾವತಾರ (ಲಕ್ಷ್ಮಣ) ದೇವಾಲಯಗಳನ್ನು ನಿರ್ಮಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT