ಪ್ರಧಾನಿ ನರೇಂದ್ರ ಮೋದಿ 
ದೇಶ

ಸಂಸತ್ತು ಭದ್ರತೆ ಉಲ್ಲಂಘನೆ ಗಂಭೀರ ಪ್ರಕರಣ, ಈ ವಿಷಯದಲ್ಲಿ ಜಗಳವಾಡುವುದು ಬೇಡ: ಪ್ರಧಾನಿ ಮೋದಿ

ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ ಒಂದು ಗಂಭೀರ ಘಟನೆಯಾಗಿದ್ದು,  ಅದನ್ನು ಅಸಡ್ಡೆ ಮಾಡಲು ಸಾಧ್ಯವೇ ಇಲ್ಲ, ಈ ವಿಷಯದಲ್ಲಿ ಜಗಳ ಬೇಡ ಎಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ನವದೆಹಲಿ: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ ಒಂದು ಗಂಭೀರ ಘಟನೆಯಾಗಿದ್ದು,  ಅದನ್ನು ಅಸಡ್ಡೆ ಮಾಡಲು ಸಾಧ್ಯವೇ ಇಲ್ಲ, ಈ ವಿಷಯದಲ್ಲಿ ಜಗಳ ಬೇಡ ಎಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಹಿಂದಿ ದೈನಿಕ ದೈನಿಕ್ ಜಾಗರಣ್‌ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿವೆ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ಮೋದಿ ಹೇಳಿದರು, ಈ ಘಟನೆ ನಡೆಸಿರುವ ಜನರು ಮತ್ತು ಅವರ ಉದ್ದೇಶಗಳ ಮೂಲಕ್ಕೆ ಹೋಗಿ ತನಿಖೆ ನಡೆಸುವುದು ಅತ್ಯಗತ್ಯ ಎಂದರು. 

ಸಂಸತ್ತಿನ ಭದ್ರತಾ ಉಲ್ಲಂಘನೆಯು ಅತ್ಯಂತ ನೋವಿನ ಕಳವಳಕಾರಿ ವಿಷಯ. ಸಾಂಘಿಕ ಮನೋಭಾವದಿಂದ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಬೇಕು.ಇಂತಹ ವಿಚಾರದಲ್ಲಿ ಕಿತ್ತಾಡಿಕೊಳ್ಳಬಾರದು ಎಂದು ಮೋದಿ ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. 

ಸಂಸತ್ತಿನಲ್ಲಿ ಸಂಭವಿಸಿದ ಘಟನೆಯ ಗಂಭೀರತೆಯನ್ನು ನಿರ್ಲಕ್ಷಿಸಬಾರದು. ಸ್ಪೀಕರ್ ಕೂಡ ಗಂಭೀರತೆಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಸಂಸತ್ತಿನ ಚಳಿಗಾಲ ಅಧಿವೇಶನ ನಡೆಯುತ್ತಿದ್ದು, ಡಿಸೆಂಬರ್ 13 ರಂದು ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‌ಗೆ ಹಾರಿ ದಾಂಧಲೆ ನಡೆಸಿದ್ದು, ವಿರೋಧ ಪಕ್ಷಗಳು ಸದನದಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರ ಹೇಳಿಕೆಗೆ ಒತ್ತಾಯಿಸುತ್ತಿದ್ದಾರೆ. ಕೆಲವು ಸದಸ್ಯರು ಶಾ ಅವರ ರಾಜೀನಾಮೆಗೆ ಕೂಡ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್