ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ದೇವಾಲಯದ ಸಿಬ್ಬಂದಿ ಶವ ಪತ್ತೆಯಾದ ನಂತರ ಉದ್ವಿಗ್ನತೆ

ವಾರದ ಹಿಂದೆ ನಾಪತ್ತೆಯಾಗಿದ್ದ ದೇವಾಲಯವೊಂದರ ಸಿಬ್ಬಂದಿಯ ಶವ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಗ್ರಾಮವೊಂದರ ಹೊರವಲಯದಲ್ಲಿ ವಿಕೃತ ಸ್ಥಿತಿಯಲ್ಲಿ ಪತ್ತೆಯಾದ ನಂತರ ಭಾನುವಾರ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಪಾಲ್ ಗಂಜ್: ವಾರದ ಹಿಂದೆ ನಾಪತ್ತೆಯಾಗಿದ್ದ ದೇವಾಲಯವೊಂದರ ಸಿಬ್ಬಂದಿಯ ಶವ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಗ್ರಾಮವೊಂದರ ಹೊರವಲಯದಲ್ಲಿ ವಿಕೃತ ಸ್ಥಿತಿಯಲ್ಲಿ ಪತ್ತೆಯಾದ ನಂತರ ಭಾನುವಾರ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಮನೋಜ್ ಕುಮಾರ್ ಸಾಹ್ ಎಂದು ಗುರುತಿಸಲಾಗಿದೆ. ಸೋಮವಾರದಂದು ದಾನಪುರ ಪ್ರದೇಶದ ಮಂಜಾ ಗ್ರಾಮದ ದೇವಸ್ಥಾನದಿಂದ ಹೊರಗೆ ಹೋಗುವಾಗ ಕೊನೆಯದಾಗಿ ಕಾಣಿಸಿಕೊಂಡಿದ್ದ ಈತನ ಶವ ಶನಿವಾರ ಪತ್ತೆಯಾಗಿದೆ ಎಂದು ಗೋಪಾಲಗಂಜ್ ಪೊಲೀಸ್ ವರಿಷ್ಠಾಧಿಕಾರಿ ಸ್ವರ್ಣ್ ಪ್ರಭಾತ್ ತಿಳಿಸಿದ್ದಾರೆ.

ಈತ ದೇವಸ್ಥಾನದ ಅರ್ಚಕ ಎಂಬ ವದಂತಿ ಹರಡುತ್ತಿದೆ. ಈತ ದೇವಸ್ಥಾನದ ಆವರಣದೊಳಗೆ ಮಲಗುತ್ತಿದ್ದ. ಸೋಮವಾರ ರಾತ್ರಿ ದೇವಸ್ಥಾನದ ಗೇಟ್‌ಗೆ ಬೀಗ ಹಾಕಿ ಹೊರಗೆ ಹೋಗುತ್ತಿರುವುದನ್ನು ಕೊನೆಯದಾಗಿ ನೋಡಿದ್ದಾಗಿ ಸ್ಥಳೀಯರು ಹೇಳುತ್ತಾರೆ. ಹೆಚ್ಚಿನ ವಿವರ ತನಿಖೆಯ ನಂತರ ಗೊತ್ತಾಗಿದೆ ಎಂದು ಪ್ರಭಾತ್ ಹೇಳಿದ್ದಾರೆ.

ದೇಹದ ಮೇಲೆ ಗುಂಡಿನ ಗಾಯಗಳು, ಕಣ್ಣುಗಳು ಮಾಯ,  ಖಾಸಗಿ ಭಾಗಗಳ ಮೇಲೆ ಗಾಯಗಳ ವರದಿ ಕುರಿತು ಉತ್ತರಿಸಿದ ಎಸ್ಪಿ, ಮರಣೋತ್ತರ ಪರೀಕ್ಷೆಯ ವರದಿ ನಂತರ ಎಲ್ಲಾವೂ ತಿಳಿದುಬರಲಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT