ಜನರ ಸ್ಥಳಾಂತರದ ಚಿತ್ರ 
ದೇಶ

ತಮಿಳುನಾಡಿನಲ್ಲಿ ಭಾರೀ ಮಳೆ: 7,500 ಜನರ ಸ್ಥಳಾಂತರ, ರೈಲು ಹಳಿಗಳು ಜಲಾವೃತ! ವಿಡಿಯೋ

ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ದಕ್ಷಿಣ ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಜ್ಯದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಾಸಿ ಜಿಲ್ಲೆಗಳಲ್ಲಿ ಭತ್ತದ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ನೀರಿನಲ್ಲಿ ಜಲಾವೃತವಾಗಿವೆ. ಅನೇಕ ವಸತಿ ಪ್ರದೇಶಗಳಿಗೂ ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. 

ಚೆನ್ನೈ: ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ದಕ್ಷಿಣ ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಜ್ಯದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಾಸಿ ಜಿಲ್ಲೆಗಳಲ್ಲಿ ಭತ್ತದ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ನೀರಿನಲ್ಲಿ ಜಲಾವೃತವಾಗಿವೆ. ಅನೇಕ ವಸತಿ ಪ್ರದೇಶಗಳಿಗೂ ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. 

ಪ್ರವಾಹದಿಂದಾಗಿ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೇವೆಗಳನ್ನು ಕೋರಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಶಿವ ದಾಸ್ ಮೀನಾ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು, ರಕ್ಷಣಾ ಮತ್ತು ಪರಿಹಾರ ಉಪಕ್ರಮಗಳಿಗಾಗಿ 84 ದೋಣಿಗಳನ್ನು ನಿಯೋಜಿಸಲಾಗಿದೆ. ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರ ಇಂದು ಸಾರ್ವಜನಿಕ ರಜೆ ಘೋಷಿಸಿದೆ.

ತೂತುಕುಡಿ ಮತ್ತು ಹತ್ತಿರದ ಪಟ್ಟಣಗಳಾದ ಶ್ರೀವೈಕುಂಡಂ ಮತ್ತು ಕಾಯಲ್‌ಪಟ್ಟಿಣಂನಂತಹ ಪ್ರದೇಶಗಳಿಗೆ ಹೆಚ್ಚುವರಿ ದೋಣಿಗಳನ್ನು ಸಜ್ಜುಗೊಳಿಸಲಾಗಿದ್ದು, ಸುಮಾರು 7,500 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 84 ಪರಿಹಾರ ಶಿಬಿರಗಳಲ್ಲಿ ಇರಿಸಲಾಗಿದೆ.  62 ಲಕ್ಷ ಜನರಿಗೆ ಎಸ್ ಎಂಎಸ್ ಮೂಲಕ ಎಚ್ಚರಿಕೆಗಳನ್ನು ಕಳುಹಿಸಲಾಗಿದೆ.

ಎನ್‌ಡಿಆರ್‌ಎಫ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆ ಮತ್ತು ಪೊಲೀಸ್ ತಂಡಗಳು ಭಾರೀ ಪ್ರಮಾಣದಲ್ಲಿ ಜಲಾವೃತಗೊಂಡ ಸ್ಥಳಗಳಿಂದ ಜನರನ್ನು ಸ್ಥಳಾಂತರಿಸಿ ಶಾಲೆಗಳು ಮತ್ತು ಮದುವೆ ಮಂದಿರಗಳಲ್ಲಿ ಇರಿಸಿದರು.

ತಿರುನೆಲ್ವೇಲಿ-ತಿರುಚೆಂದೂರು ಸೆಕ್ಷನ್‌ನಲ್ಲಿ ಶ್ರೀವೈಕುಂಟಂ ಮತ್ತು ಸೇಡುಂಗನಲ್ಲೂರು ನಡುವೆ 'ಬ್ಯಾಲೆಸ್ಟ್' ಕೊಚ್ಚಿಹೋಗಿದ್ದು, ಹಳಿ ನೇತಾಡುತ್ತಿದೆ. ರೈಲು ಹಳಿಗಳ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ದಕ್ಷಿಣ ಪ್ರದೇಶಗಳ ಮೂಲಕ ಕಾರ್ಯನಿರ್ವಹಿಸುವ ಹಲವಾರು ರೈಲು ಸೇವೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ, ಕೆಲವನ್ನು ಭಾಗಶಃ ಸ್ಥಗಿತಗೊಳಿಸಲಾಗಿದೆ ಮತ್ತು ಕೆಲವು ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ಕನ್ಯಾಕುಮಾರಿ ಜಿಲ್ಲೆಯ ಓಝುಗಿನಚೇರಿಯಲ್ಲಿ ನೀರಿನ ಮಟ್ಟ 4 ಅಡಿ ದಾಟಿದ್ದು, ಪಜಹಯಾರು ನದಿ ಉಕ್ಕಿ ಹರಿಯುತ್ತಿರುವುದರಿಂದ ಭತ್ತದ ಗದ್ದೆಗಳು ಮುಳುಗಡೆಯಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT