ಜ್ಞಾನವಾಪಿ ಮಸೀದಿ ಸಮೀಕ್ಷೆ 
ದೇಶ

Gyanvapi Survey: ನ್ಯಾಯಾಲಯಕ್ಕೆ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ

ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ನವದೆಹಲಿ: ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ಸಂಪೂರ್ಣವಾಗಿ ಸೀಲ್ ಮಾಡಿದ (ಮುಚ್ಚಿದ ಲಕೋಟೆ) ದಾಖಲೆಯನ್ನು ಭಾರತೀಯ ಪುರಾತತ್ವ ಇಲಾಖೆಯು (Archaeological Survey of India) ನ್ಯಾಯಾಲಯಕ್ಕೆ ಸಲ್ಲಿಸಿದೆ. ಭಾರತೀಯ ಪುರಾತತ್ವ ಇಲಾಖೆ (ASI) ತನ್ನ ಸಂಶೋಧನೆಗಳನ್ನು ಸಲ್ಲಿಸಲು ನಿಗದಿಪಡಿಸಿದ ಸಮಯಕ್ಕಿಂತ ಆರು ಅವಧಿ ವಿಸ್ತರಣೆಗಳನ್ನು ತೆಗೆದುಕೊಂಡಿತ್ತು. ಅಧ್ಯಯನ ಮತ್ತು ವಿಶ್ಲೇಷಣೆ ಮಾಡಬೇಕಾದ ಅಪಾರ ಪ್ರಮಾಣದ ಡೇಟಾವನ್ನು ಉಲ್ಲೇಖಿಸಿದೆ. ನವೆಂಬರ್ 2ರಂದು ಸಮೀಕ್ಷೆಯನ್ನು ಮುಗಿಸಿದ್ದೇನೆ ಎಂದು ತಿಳಿಸಿದೆ. ಆದರೆ ಸಮೀಕ್ಷೆಯ ಸಮಯದಲ್ಲಿ ಬಳಸಿದ ಉಪಕರಣಗಳ ವಿವರಗಳನ್ನು ಸಲ್ಲಿಸುವುದು ಸೇರಿದಂತೆ ವರದಿಯನ್ನು ಸಮಗ್ರವಾಗಿ ಮಂಡಿಸಲು ಹೆಚ್ಚಿನ ಸಮಯವನ್ನು ಕೇಳಿದೆ.

ಇದೀಗ ವರದಿ ಸಲ್ಲಿಕೆಯಾಗಿದ್ದು, ಇದನ್ನು ಸಾರ್ವಜನಿಕಗೊಳಿಸಲಾಗುತ್ತದೆಯೇ, ಅಥವಾ ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರೊಂದಿಗೆ ಹಂಚಿಕೊಳ್ಳಲಾಗುತ್ತದೆಯೋ ಎಂಬುದು ಸ್ಪಷ್ಟವಾಗಿಲ್ಲ. ಈ ಕುರಿತ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.

ಕೆಲವು ಮೊಹರು ಮಾಡಿದ ವಿಭಾಗಗಳನ್ನು ಹೊರತುಪಡಿಸಿ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಯು ಆಗಸ್ಟ್‌ನಲ್ಲಿ ಪ್ರಾರಂಭವಾಯಿತು. 17ನೇ ಶತಮಾನದ ಮಸೀದಿಯನ್ನು ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಗಳ ಮೇಲೆ ನಿರ್ಮಿಸಲಾಗಿದೆಯೇ ಎಂದು ಪರಿಶೀಲಿಸಲು ಸಮೀಕ್ಷೆಯನ್ನು ಉದ್ದೇಶಿಸಲಾಗಿತ್ತು. ವಾರಣಾಸಿ ನ್ಯಾಯಾಲಯ ಮಸೀದಿ ಒಳಭಾಗದಲ್ಲಿ ಉತ್ಖನನಕ್ಕೆ ಅವಕಾಶ ನೀಡಿತ್ತು.

ವಾರಣಾಸಿ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದ ನಂತರ ಸಮೀಕ್ಷೆ ಆರಂಭವಾಗಿದೆ. ನ್ಯಾಯದ ಹಿತದೃಷ್ಟಿಯಿಂದ ಸಮೀಕ್ಷೆ ಅಗತ್ಯವಾಗಿದೆ ಮತ್ತು ವಿವಾದದಲ್ಲಿ ಎರಡೂ ಕಡೆಯವರಿಗೆ ಲಾಭವಾಗಲಿದೆ ಎಂದು ಹೈಕೋರ್ಟ್ ಹೇಳಿತ್ತು. ಅಂದಹಾಗೆ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 21 ಕ್ಕೆ ನಿಗದಿಪಡಿಸಿದ್ದು, ಕಾಶಿ ವಿಶ್ವನಾಥ ದೇವಾಲಯ-ಜ್ಞಾನವಾಪಿ ಮಸೀದಿ ವಿವಾದದ ಭವಿಷ್ಯವು ನಿರ್ಣಾಯಕ ತಿರುವು ಪಡೆಯುವ ಸಾಧ್ಯತೆಯಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT