ಜ್ಞಾನವಾಪಿ ಮಸೀದಿ ಸಮೀಕ್ಷೆ 
ದೇಶ

Gyanvapi Survey: ನ್ಯಾಯಾಲಯಕ್ಕೆ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ

ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ನವದೆಹಲಿ: ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ಸಂಪೂರ್ಣವಾಗಿ ಸೀಲ್ ಮಾಡಿದ (ಮುಚ್ಚಿದ ಲಕೋಟೆ) ದಾಖಲೆಯನ್ನು ಭಾರತೀಯ ಪುರಾತತ್ವ ಇಲಾಖೆಯು (Archaeological Survey of India) ನ್ಯಾಯಾಲಯಕ್ಕೆ ಸಲ್ಲಿಸಿದೆ. ಭಾರತೀಯ ಪುರಾತತ್ವ ಇಲಾಖೆ (ASI) ತನ್ನ ಸಂಶೋಧನೆಗಳನ್ನು ಸಲ್ಲಿಸಲು ನಿಗದಿಪಡಿಸಿದ ಸಮಯಕ್ಕಿಂತ ಆರು ಅವಧಿ ವಿಸ್ತರಣೆಗಳನ್ನು ತೆಗೆದುಕೊಂಡಿತ್ತು. ಅಧ್ಯಯನ ಮತ್ತು ವಿಶ್ಲೇಷಣೆ ಮಾಡಬೇಕಾದ ಅಪಾರ ಪ್ರಮಾಣದ ಡೇಟಾವನ್ನು ಉಲ್ಲೇಖಿಸಿದೆ. ನವೆಂಬರ್ 2ರಂದು ಸಮೀಕ್ಷೆಯನ್ನು ಮುಗಿಸಿದ್ದೇನೆ ಎಂದು ತಿಳಿಸಿದೆ. ಆದರೆ ಸಮೀಕ್ಷೆಯ ಸಮಯದಲ್ಲಿ ಬಳಸಿದ ಉಪಕರಣಗಳ ವಿವರಗಳನ್ನು ಸಲ್ಲಿಸುವುದು ಸೇರಿದಂತೆ ವರದಿಯನ್ನು ಸಮಗ್ರವಾಗಿ ಮಂಡಿಸಲು ಹೆಚ್ಚಿನ ಸಮಯವನ್ನು ಕೇಳಿದೆ.

ಇದೀಗ ವರದಿ ಸಲ್ಲಿಕೆಯಾಗಿದ್ದು, ಇದನ್ನು ಸಾರ್ವಜನಿಕಗೊಳಿಸಲಾಗುತ್ತದೆಯೇ, ಅಥವಾ ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರೊಂದಿಗೆ ಹಂಚಿಕೊಳ್ಳಲಾಗುತ್ತದೆಯೋ ಎಂಬುದು ಸ್ಪಷ್ಟವಾಗಿಲ್ಲ. ಈ ಕುರಿತ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.

ಕೆಲವು ಮೊಹರು ಮಾಡಿದ ವಿಭಾಗಗಳನ್ನು ಹೊರತುಪಡಿಸಿ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಯು ಆಗಸ್ಟ್‌ನಲ್ಲಿ ಪ್ರಾರಂಭವಾಯಿತು. 17ನೇ ಶತಮಾನದ ಮಸೀದಿಯನ್ನು ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಗಳ ಮೇಲೆ ನಿರ್ಮಿಸಲಾಗಿದೆಯೇ ಎಂದು ಪರಿಶೀಲಿಸಲು ಸಮೀಕ್ಷೆಯನ್ನು ಉದ್ದೇಶಿಸಲಾಗಿತ್ತು. ವಾರಣಾಸಿ ನ್ಯಾಯಾಲಯ ಮಸೀದಿ ಒಳಭಾಗದಲ್ಲಿ ಉತ್ಖನನಕ್ಕೆ ಅವಕಾಶ ನೀಡಿತ್ತು.

ವಾರಣಾಸಿ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದ ನಂತರ ಸಮೀಕ್ಷೆ ಆರಂಭವಾಗಿದೆ. ನ್ಯಾಯದ ಹಿತದೃಷ್ಟಿಯಿಂದ ಸಮೀಕ್ಷೆ ಅಗತ್ಯವಾಗಿದೆ ಮತ್ತು ವಿವಾದದಲ್ಲಿ ಎರಡೂ ಕಡೆಯವರಿಗೆ ಲಾಭವಾಗಲಿದೆ ಎಂದು ಹೈಕೋರ್ಟ್ ಹೇಳಿತ್ತು. ಅಂದಹಾಗೆ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 21 ಕ್ಕೆ ನಿಗದಿಪಡಿಸಿದ್ದು, ಕಾಶಿ ವಿಶ್ವನಾಥ ದೇವಾಲಯ-ಜ್ಞಾನವಾಪಿ ಮಸೀದಿ ವಿವಾದದ ಭವಿಷ್ಯವು ನಿರ್ಣಾಯಕ ತಿರುವು ಪಡೆಯುವ ಸಾಧ್ಯತೆಯಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT