ಗಿರಿರಾಜ್ ಸಿಂಗ್ 
ದೇಶ

ಧರ್ಮ ಭ್ರಷ್ಟರಾಗಬೇಡಿ, ಹಲಾಲ್ ಮಾಂಸ ತಿನ್ನುವುದನ್ನು ಬಿಡಿ: ಹಿಂದೂಗಳಿಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕರೆ!

ಜಟ್ಕಾ ಮಾಂಸ ವಿಧಾನದಲ್ಲಿ ಪ್ರಾಣಿಯನ್ನು ಒಂದೇ ಹೊಡೆತದಲ್ಲಿ ಕೊಲ್ಲಲಾಗುತ್ತದೆ. ಇನ್ನು ಮುಂದೆ ಹಲಾಲ್ ಮಾಂಸವನ್ನು ತಿನ್ನುವ ಮೂಲಕ ನಮ್ಮ ಧರ್ಮವನ್ನು ಭ್ರಷ್ಟಗೊಳಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದು ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

ಪಾಟ್ನಾ: ಕೆಲವು ದಿನಗಳ ಹಿಂದೆ ದೇಶಾದ್ಯಂತ ಭಾರೀ ಚರ್ಚೆಯಾಗಿದ್ದ ಹಲಾಲ್‌ ಮಾಂಸದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.  ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ತ್ಯಜಿಸಬೇಕು ಮತ್ತು ಒಂದೇ ಹೊಡೆತದಿಂದ ಕೊಲ್ಲಲ್ಪಟ್ಟ ಪ್ರಾಣಿಗಳ ಮಾಂಸವಾದ ‘ಜಟ್ಕಾ’ ಮಾತ್ರ ಸೇವಿಸಬೇಕು ಎಂದು  ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕರೆ ನೀಡಿದ್ದಾರೆ.

ಬಿಹಾರದ ಬೇಗುಸರಾಯ್‌ಯಲ್ಲಿ ಭಾನುವಾರ ಮಾತನಾಡಿದ  ಅವರು,  ಜಟ್ಕಾ ಮಾಂಸ ವಿಧಾನದಲ್ಲಿ ಪ್ರಾಣಿಯನ್ನು ಒಂದೇ ಹೊಡೆತದಲ್ಲಿ ಕೊಲ್ಲಲಾಗುತ್ತದೆ. ಇನ್ನು ಮುಂದೆ ಹಲಾಲ್ ಮಾಂಸವನ್ನು ತಿನ್ನುವ ಮೂಲಕ ನಮ್ಮ ಧರ್ಮವನ್ನು ಭ್ರಷ್ಟಗೊಳಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು ಎಂದು ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ವನ್ನು ಹಾಳು ಮಾಡುವುದಿಲ್ಲ ಎಂದು ಅವರ ಬೆಂಬಲಿಗರು ಈ ಸಂದರ್ಭದಲ್ಲಿ ಪ್ರತಿಜ್ಞೆ ಕೈಗೊಂಡರು. ʼʼಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಈಗ ಹಿಂದೂಗಳು ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆಯನ್ನು ಪ್ರದರ್ಶಿಸಬೇಕುʼʼ ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಹಿಂದೂ ವಧೆಯ ವಿಧಾನವೆಂದರೆ ಅದು ಜಟ್ಕಾ. ಹಿಂದೂಗಳು ಪ್ರಾಣಿ ಬಲಿ ಮಾಡಿದಾಗಲೆಲ್ಲ ಒಂದೇ ಹೊಡೆತಕ್ಕೆ ಕೊಲ್ಲುತ್ತಾರೆ. ಆದ್ದರಿಂದ ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮನ್ನು ಭ್ರಷ್ಟಗೊಳಿಸಬಾರದು. ಯಾವಾಗಲೂ ಜಟ್ಕಾ ವಿಧಾನವನ್ನೇ ಆಯ್ದುಕೊಳ್ಳಬೇಕು ಎಂದು ಗಿರಿರಾಜ್ ಸಿಂಗ್ ಕಿವಿಮಾತು ಹೇಳಿದ್ದಾರೆ. ಕಸಾಯಿಖಾನೆಗಳು ಮತ್ತು ಜಟ್ಕಾ ಮಾಂಸವನ್ನು ಮಾತ್ರ ಮಾರಾಟ ಮಾಡುವ ಅಂಗಡಿಗಳು ಇರುವ ಹೊಸ ಮಾದರಿಯ ವ್ಯವಹಾರದ ಅಗತ್ಯವನ್ನು ಅವರು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT