ಉಮೇಶ್ ಪಾಲ್ ಹತ್ಯೆ ಆರೋಪಿ 
ದೇಶ

ಉತ್ತರ ಪ್ರದೇಶ: ಉಮೇಶ್ ಪಾಲ್ ಹತ್ಯೆ ಆರೋಪಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವು

ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಕೊಲೆಯಾದ ಗ್ಯಾಂಗ್ ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಅವರ ಸಹಾಯಕ ನಫೀಸ್ ಬಿರಿಯಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪ್ರಯಾಗ್ ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಕೊಲೆಯಾದ ಗ್ಯಾಂಗ್ ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಅವರ ಸಹಾಯಕ ನಫೀಸ್ ಬಿರಿಯಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

50 ವರ್ಷದ ನಫೀಸ್ ಭಾನುವಾರ ಸಂಜೆ ಎಸ್‌ಆರ್‌ಎನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ರಯಾಗ್‌ರಾಜ್ ಪೊಲೀಸರು ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ್ರಾಥಮಿಕವಾಗಿ ಸಾವಿಗೆ ಹೃದಯ ವೈಫಲ್ಯ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಮತ್ತು ಅವರ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಫೆಬ್ರವರಿ 25, 2023 ರಂದು ಗುಂಡಿಕ್ಕಿ ಕೊಲ್ಲಲಾಗಿತ್ತು. ದಾಳಿಯ ವೇಳೆ ಬಳಸಿದ ಕಾರು ಬಿರಿಯಾನಿಗೆ ಸೇರಿತ್ತು ಎಂದು ಹೇಳಲಾಗಿದೆ.

ಉಮೇಶ್ ಪಾಲ್ ಅವರ ಪತ್ನಿ ಜಯಪಾಲ್ ಅವರ ದೂರಿನ ಮೇರೆಗೆ ಧುಮನಗಂಜ್ ಪೊಲೀಸ್ ಠಾಣೆಯಲ್ಲಿ ಅತೀಕ್ ಅಹ್ಮದ್, ಅವರ ಸಹೋದರ ಅಶ್ರಫ್, ಪತ್ನಿ ಶೈಸ್ತಾ ಪರ್ವೀನ್, ಅತೀಕ್ ಅವರ ಇಬ್ಬರು ಪುತ್ರರು, ಅವರ ಸಹಾಯಕರಾದ ಗುಡ್ಡು ಮುಸ್ಲಿಂ ಮತ್ತು ಗುಲಾಮ್ ಮತ್ತು ಇತರ ಒಂಬತ್ತು ಸಹಚರರ ವಿರುದ್ಧ ಪ್ರಕರಣ ದಾಖಲಾಗಿತ್ತು. 

ಉಮೇಶ್ ಪಾಲ್ ಕೊಲೆ ಪ್ರಕರಣ ಸೇರಿದಂತೆ 100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಹೆಸರು ಕೇಳಿಬಂದಿದ್ದ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಈ ವರ್ಷದ ಏಪ್ರಿಲ್ 15 ರಂದು ಗುಂಡಿಕ್ಕಿ ಹತ್ಯೆಗೈಯಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT