ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಜೆಎನ್.1 ರೂಪಾಂತರಿ, ಆತಂಕಪಡುವ ಅಗತ್ಯವಿಲ್ಲ- ಡಾ. ಎನ್.ಕೆ. ಆರೋರಾ

ಕೋವಿಡ್-19 ರೂಪಾಂತರಿ ಜೆಎನ್.1 ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ ( ಐಎನ್ ಎಸ್ ಎಸಿಒಜಿ) ಮುಖ್ಯಸ್ಥರಾದ ಡಾ.ಎನ್.ಕೆ. ಆರೋರಾ ಹೇಳಿದ್ದಾರೆ. 

ನವದೆಹಲಿ: ಕೋವಿಡ್-19 ರೂಪಾಂತರಿ ಜೆಎನ್.1 ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ ( ಐಎನ್ ಎಸ್ ಎಸಿಒಜಿ) ಮುಖ್ಯಸ್ಥರಾದ ಡಾ.ಎನ್.ಕೆ. ಆರೋರಾ ಹೇಳಿದ್ದಾರೆ. 

ಕೇರಳದಲ್ಲಿ ಒಂದು ಸಾವಿನ ವರದಿಯ ಹೊರತಾಗಿಯೂ, ಆತನ ಸಾವು ಕೇವಲ ವೈರಸ್ ಸೋಂಕಿನಿಂದ ಆಗಿಲ್ಲ. ಆತನಿಗೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿದ್ದವು ಎಂದು ಅವರು ಹೇಳಿದ್ದಾರೆ.

ಮೃತನು ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡ ಕಾಯಿಲೆಗಳಿಂದ ಬಳಲುತ್ತದ್ದರು. ಈ ಕಾರಣದಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಕೇವಲ ಜಿಎನ್.1 ಸೋಂಕಿನಿಂದ ಅಲ್ಲ ಎಂದು ಅರೋರಾ ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ನಡೆಯುತ್ತಿರುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮಾದರಿ ಸಂಖ್ಯೆಗಳು ಸೀಮಿತವಾಗಿದ್ದರೂ, ಅವುಗಳನ್ನು ರಾಷ್ಟ್ರವ್ಯಾಪಿ ಸಂಗ್ರಹಿಸಲಾಗುತ್ತಿದೆ ಎಂದು ಡಾ. ಅರೋರಾ ಒತ್ತಿ ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ