ಇಂಡಿಯಾ ಮೈತ್ರಿಕೂಟದ ನಾಯಕರು 
ದೇಶ

2024 ಲೋಕಸಭಾ ಚುನಾವಣೆ: ಇಂದು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ, ಸೀಟ್ ಹಂಚಿಕೆ, ಕಾರ್ಯತಂತ್ರ ಕುರಿತು ಚರ್ಚೆ

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರವನ್ನು ಪುನರ್ ರೂಪಿಸುವ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಮಂಗಳವಾರ ಮಹತ್ವದ ಸಭೆ ನಡೆಸಲಿದೆ.  

ನವದೆಹಲಿ: ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರ ಪುನರ್ ರೂಪಿಸುವ ಕುರಿತು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ  ಇಂದು ನಡೆಯಲಿದೆ.

ಇಂದಿನ ಸಭೆಯಲ್ಲಿ "ಮೇನ್ ನಹಿಂ, ಹಮ್ (ನಾವು, ನಾನಲ್ಲ)" ಎಂಬ ಥೀಮ್ ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ. ಇಲ್ಲಿನ ಅಶೋಕ್ ಹೋಟೆಲ್ ನಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಿಗಧಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದರು.

ಇಂದು ಪ್ರತಿಪಕ್ಷಗಳ ಒಕ್ಕೂಟದ ನಾಲ್ಕನೇ ಸಭೆಯಾಗಿದೆ. ಜೂನ್ 23 ರಂದು ಪಾಟ್ನಾದಲ್ಲಿ ಮೊದಲ ಸಭೆ ನಡೆದಿತ್ತು. ಜುಲೈ 17-18 ರಂದು ಬೆಂಗಳೂರಿನಲ್ಲಿ 2ನೇ ಸಭೆ ಮತ್ತು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರ ನಡುವೆ ಮುಂಬೈನಲ್ಲಿ ಮೂರನೇ ಸಭೆ ನಡೆದಿತ್ತು. ಅಲ್ಲಿ 27 ಪಕ್ಷಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸಲು ನಿರ್ಣಯಗಳನ್ನು ಅಂಗೀಕರಿಸಿದ್ದವು.

ಈ ಮಧ್ಯೆ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, 2024ರ ಸಾರ್ವತ್ರಿಕ ಚುನಾವಣೆ ನಂತರ ಪ್ರಧಾನ ಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಹೇಳಿದರು. ಬಿಜೆಪಿಯನ್ನು ಪ್ರತಿಪಕ್ಷಗಳು ಸೋಲಿಸಲಿವೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವೆ ತ್ರಿಕೋನ ಮೈತ್ರಿ ಸಾಧ್ಯವಾಗಲಿದೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು.

ವಿಶೇಷವಾಗಿ ಹಿಂದಿ ಬೆಲ್ಟ್‌ನಲ್ಲಿ ಬಿಜೆಪಿಯ ಹೆಚ್ಚುತ್ತಿರುವ ಪ್ರಭಾವ ಕುರಿತು ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, ಹಿಂದಿ ಬೆಲ್ಟ್ ಮತ್ತು ಇತರ ಪ್ರದೇಶಗಳ ನಡುವೆ ತಾರತಮ್ಯ ಮಾಡುವುದಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಇಂಡಿಯಾ ಒಕ್ಕೂಟ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT