ಲೋಕಸಭಾ ಸಂಸದರು 
ದೇಶ

ಲೋಕಸಭೆಯಲ್ಲಿ ಪ್ರತಿಪಕ್ಷದ ಒಟ್ಟು 138 ಸಂಸದರ ಪೈಕಿ ಸಂಸತ್ತಿನಲ್ಲಿ ಉಳಿದಿರುವುದು 43 ಮಾತ್ರ!

ಲೋಕಸಭೆಯಲ್ಲಿ ಸಂಸದರ ಅಮಾನತು ಸರಣಿ ಇಂದು ಸಹ ಮುಂದುವರೆದಿದ್ದು, ಚಳಿಗಾಲದ ಅಧಿವೇಶನದ ಅವಧಿಗೆ INDIA ಕೂಟದ ತನ್ನ ಮೂರನೇ ಎರಡರಷ್ಟು ಬಲವನ್ನು ಕಳೆದುಕೊಂಡಿದೆ.

ನವದೆಹಲಿ: ಲೋಕಸಭೆಯಲ್ಲಿ ಸಂಸದರ ಅಮಾನತು ಸರಣಿ ಇಂದು ಸಹ ಮುಂದುವರೆದಿದ್ದು, ಚಳಿಗಾಲದ ಅಧಿವೇಶನದ ಅವಧಿಗೆ INDIA ಕೂಟದ ತನ್ನ ಮೂರನೇ ಎರಡರಷ್ಟು ಬಲವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ನ ಒಂಬತ್ತು ಸಂಸದರು ಮಾತ್ರ ಇದ್ದಾರೆ.

ಮಂಗಳವಾರ, ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ 49 ಪ್ರತಿಪಕ್ಷ ಸಂಸದರನ್ನು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಲಾಗಿದೆ. ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರ ಒಟ್ಟು ಸಂಖ್ಯೆ 95ಕ್ಕೆೇರಿದೆ. ಇನ್ನು ರಾಜ್ಯಸಭೆಯಲ್ಲಿ 46 ಸದಸ್ಯರನ್ನು ಅಮಾನತು ಮಾಡಲಾಗಿದ್ದು ಒಟ್ಟಾರೆ ಅಮಾನತುಗೊಂಡ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ಲೋಕಸಭೆಯಲ್ಲಿ INDIA ಕೂಟವು 138 ಸಂಸದರ ಬಲವನ್ನು ಹೊಂದಿತ್ತು. ಈಗ ಅದರಲ್ಲಿ 43 ಸಂಸದರು ಸದನದಲ್ಲಿ ಉಳಿದಿದ್ದಾರೆ. ಅಮಾನತುಗೊಂಡವರಲ್ಲಿ ಕಾಂಗ್ರೆಸ್‌ನ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂಡೋಪಾಧ್ಯಾಯ ಸೇರಿದ್ದಾರೆ. ಇದುವರೆಗೆ 22 ತೃಣಮೂಲ ಕಾಂಗ್ರೆಸ್ ಸಂಸದರ ಪೈಕಿ 13 ಮಂದಿಯನ್ನು ಅಮಾನತುಗೊಳಿಸಲಾಗಿದೆ.

ಸದನದಲ್ಲಿ 24 ಸದಸ್ಯರ ಬಲ ಹೊಂದಿರುವ ದ್ರಾವಿಡ ಮುನ್ನೇತ್ರ ಕಳಗಂನಿಂದ 16 ಸಂಸದರನ್ನು ಅಮಾನತುಗೊಳಿಸಲಾಗಿದೆ. ಆಮ್ ಆದ್ಮಿ ಪಕ್ಷದ ಏಕೈಕ ಲೋಕಸಭಾ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನೂ ಅಮಾನತುಗೊಳಿಸಲಾಗಿದೆ.

ಇತರ INDIA ಕೂಟದ ಪಕ್ಷಗಳಲ್ಲಿ ಪ್ರತಿಪಕ್ಷವಾಗಿರುವ ನಾಲ್ವರಲ್ಲಿ ನಾಯಕಿ ಸುಪ್ರಿಯಾ ಸುಳೆ ಸೇರಿದಂತೆ ಶರದ್ ಪವಾರ್ ಬಣಕ್ಕೆ ಸೇರಿದ ಮೂವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿದೆ.

ನ್ಯಾಷನಲ್ ಕಾನ್ಫರೆನ್ಸ್‌ನಿಂದ ಫಾರೂಕ್ ಅಬ್ದುಲ್ಲಾ ಸೇರಿದಂತೆ ಮೂವರು ಸಂಸದರ ಪೈಕಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಆದರೆ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಅವರ ಆರು ಸಂಸದರಲ್ಲಿ ಯಾರನ್ನೂ ಅಮಾನತು ಮಾಡಲಾಗಿಲ್ಲ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಲ್ಲಾ ಮೂವರು ಸಂಸದರು, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ರೆವಲ್ಯೂಷನರಿ ಸೋಷಿಯಲಿಸ್ಟ್ ಪಕ್ಷದ ಏಕೈಕ ಸಂಸದರು, ಡಿಂಪಲ್ ಯಾದವ್ ಸೇರಿದಂತೆ ಸಮಾಜವಾದಿ ಪಕ್ಷದ ಮೂವರು ಸಂಸದರಲ್ಲಿ ಇಬ್ಬರು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್‌ನ ಮೂವರು ಸಂಸದರಲ್ಲಿ ಇಬ್ಬರು ಮತ್ತು ಒಬ್ಬರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಇಬ್ಬರು ಸಂಸದರನ್ನು ಅಮಾನತುಗೊಳಿಸಲಾಗಿದೆ.

ಬಹುಜನ ಸಮಾಜ ಪಕ್ಷದಿಂದ ಇತ್ತೀಚೆಗೆ ಅಮಾನತುಗೊಂಡಿರುವ ಡ್ಯಾನಿಶ್ ಅಲಿ ಕೂಡ ಕೆಳಮನೆಯಿಂದ ಅಮಾನತುಗೊಂಡ ಸಂಸದರಲ್ಲಿ ಸೇರಿದ್ದಾರೆ.

ಡಿಸೆಂಬರ್ 13ರಂದು ಸಂಸತ್ತಿನಲ್ಲಿ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಲು INDIA ಕೂಟದ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT