ದೆಹಲಿಯಲ್ಲಿ ಮಂಗಳವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ (ಮಧ್ಯದಲ್ಲಿ). 
ದೇಶ

INDIA ಸಭೆ: ಭಾಷಾಂತರ ಕೇಳಿದ ಡಿಎಂಕೆ ನಾಯಕ; ಹಿಂದಿ ರಾಷ್ಟ್ರ ಭಾಷೆ, ಪ್ರತಿಯೊಬ್ಬರೂ ಕಲಿಯಬೇಕು ಎಂದ ನಿತೀಶ್ ಕುಮಾರ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸಲು ಮನವಿ ಮಾಡಿದ ಡಿಎಂಕೆ ನಾಯಕರ ವಿರುದ್ಧ ಕಿಡಿಕಾರಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸಲು ಮನವಿ ಮಾಡಿದ ಡಿಎಂಕೆ ನಾಯಕರ ವಿರುದ್ಧ ಕಿಡಿಕಾರಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ರಾಜ್ಯಸಭಾ ಸಂಸದ ಟಿಆರ್ ಬಾಲು ನೇತೃತ್ವದ ಡಿಎಂಕೆ ನಿಯೋಗ ಸಭೆಯಲ್ಲಿ ಪಾಲ್ಗೊಂಡಿತ್ತು.

ವರದಿಗಳ ಪ್ರಕಾರ, ಜೆಡಿಯು ಅಧ್ಯಕ್ಷರ ಭಾಷಣವನ್ನು ಭಾಷಾಂತರಿಸುವಂತೆ ಬಾಲು ಅವರು ಆರ್‌ಜೆಡಿಯ ಮನೋಜ್ ಝಾ ಅವರನ್ನು ಕೇಳಿದ್ದಾರೆ. ಈ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ನಿತೀಶ್, ಹಿಂದಿ ರಾಷ್ಟ್ರ ಭಾಷೆಯಾಗಿದ್ದು, ಪ್ರತಿಯೊಬ್ಬರೂ ಅದನ್ನು ಕಲಿಯಬೇಕು ಎಂದಿದ್ದಾರೆ.

ಝಾ ಅವರು ನಿತೀಶ್ ಅವರ ಭಾಷಣವನ್ನು ಭಾಷಾಂತರಿಸಲು ಮುಂದಾದಾಗ, ದಕ್ಷಿಣದ ರಾಜ್ಯಗಳ ನಾಯಕರು ಹಿಂದಿಯನ್ನು ಕಲಿಯಬೇಕು ಮತ್ತು ಅನುವಾದ ಮಾಡದಂತೆ ಆರ್‌ಜೆಡಿ ಸಂಸದರಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಭಾರತದ ಸ್ವಾತಂತ್ರ್ಯ ಹೋರಾಟದ ಬಗ್ಗೆ ವಾಗ್ದಾಳಿ ನಡೆಸಿದ ನಿತೀಶ್, ವಸಾಹತುಶಾಹಿ ಅವಶೇಷಗಳನ್ನು ತ್ಯಜಿಸಲು ಜನರನ್ನು ಒತ್ತಾಯಿಸಿದರು ಮತ್ತು ದೇಶವು ಬಹಳ ಹಿಂದೆಯೇ ಬ್ರಿಟಿಷ್ ಆಳ್ವಿಕೆಯಿಂದ ವಿಮೋಚನೆಗೊಂಡಿದೆ ಎಂದು ಒತ್ತಿ ಹೇಳಿದರು.

ಇಂಡಿಯಾ ಮೈತ್ರಿಕೂಟದಲ್ಲಿ ತಮ್ಮ ಮತ್ತು ತಮ್ಮ ಪಕ್ಷದ ಪಾತ್ರದ ಬಗೆಗಿನ ಊಹಾಪೋಹಗಳ ನಡುವೆ ನಿತೀಶ್ ಮಂಗಳವಾರದ ಸಭೆಯ ಉದ್ದಕ್ಕೂ ಅತೃಪ್ತಿ ಪ್ರದರ್ಶಿಸಿದರು ಎಂದು ವರದಿಗಳು ಸೂಚಿಸುತ್ತವೆ. ಇಂಡಿಯಾ ಮೈತ್ರಿಕೂಟ ರಚನೆಯಾದಾಗಿನಿಂದ, ನಿತೀಶ್ ಅವರು ಮೈತ್ರಿಯ ಸಂಚಾಲಕನ ಪಾತ್ರಕ್ಕೆ ತಮ್ಮನ್ನು ತಾವು ಆಯ್ಕೆ ಮಾಡಿಕೊಂಡಿದ್ದು, ವಿಪಕ್ಷಗಳ ಮೈತ್ರಿಕೂಟದ ಪ್ರಧಾನ ಮಂತ್ರಿ ಮುಖದ ಸಂಭಾವ್ಯ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.

ಮಂಗಳವಾರ ಜೆಡಿಯು ನಾಯಕ ಇಂಡಿಯಾ ಮೈತ್ರಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಂದರ್ಭದಲ್ಲಿ ನಿತೀಶ್ ಅವರಿಗೆ ಪ್ರಧಾನಿ ಹುದ್ದೆ ನೀಡುವಂತೆ ಕೇಳುವ ಪೋಸ್ಟರ್‌ಗಳು ಪಾಟ್ನಾದ ಹಲವು ಭಾಗಗಳಲ್ಲಿ ಕಂಡುಬಂದವು. ನಿತೀಶ್ ಕುಮಾರ್ ಅವರು ಜೂನ್‌ನಲ್ಲಿ ಪಾಟ್ನಾದಲ್ಲಿ ಪ್ರತಿಪಕ್ಷ ನಾಯಕರ ಮೊದಲ ಸಭೆಯನ್ನು ಆಯೋಜಿಸಿದ್ದರು.

ಗಮನಾರ್ಹವಾಗಿ, ಭಾರತಕ್ಕೆ ಯಾವುದೇ ಅಧಿಕೃತ ರಾಷ್ಟ್ರೀಯ ಭಾಷೆ ಇಲ್ಲ.

ಆದಾಗ್ಯೂ, ರಾಷ್ಟ್ರ ಮಟ್ಟದಲ್ಲಿ ಎರಡು ಅಧಿಕೃತ ಭಾಷೆಗಳನ್ನು ಹೊಂದಿದೆ. ಅದು ಹಿಂದಿ ಮತ್ತು ಇಂಗ್ಲಿಷ್ ಆಗಿದೆ. ಭಾರತೀಯ ಸಂವಿಧಾನದ ಎಂಟನೇ ವಿಧಿ ಪ್ರಕಾರ, ಬಂಗಾಳಿ, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ 22 ಗೊತ್ತುಪಡಿಸಿದ ಅಧಿಕೃತ ಭಾಷೆಗಳು ದೇಶದಲ್ಲಿವೆ. 

ಅನೇಕ ರಾಜ್ಯಗಳು ತಮ್ಮ ಅಧಿಕೃತ ಭಾಷೆಗಳನ್ನು ಹೊಂದಿವೆ. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಟ್ಟದಲ್ಲಿ ಅಧಿಕೃತ ಉದ್ದೇಶಗಳಿಗಾಗಿ ಹಲವಾರು ಭಾಷೆಗಳ ಬಳಕೆಯನ್ನು ಒದಗಿಸುವ ಮೂಲಕ ಸಂವಿಧಾನವು ಭಾಷಾ ವೈವಿಧ್ಯತೆಯನ್ನು ಗುರುತಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT