ಸಾಂದರ್ಭಿಕ ಚಿತ್ರ 
ದೇಶ

ಸಂಸತ್ ಭದ್ರತಾ ಲೋಪ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು!

ಡಿ.13ರಂದು ಇಬ್ಬರು ಯುವಕರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಹೊಗೆ ಬಾಂಬ್ ಸಿಡಿಸಿ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ನವದೆಹಲಿ: ಡಿ.13ರಂದು ಇಬ್ಬರು ಯುವಕರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಹೊಗೆ ಬಾಂಬ್ ಸಿಡಿಸಿ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. 

ಇದೀಗ ಜಲೌನ್‌ನ ನಿವಾಸಿ ಅತುಲ್ ಕುಲಶ್ರೇಷ್ಠ ಅಲಿಯಾಸ್ ಬಚಾ ಎಂಬಾತನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಓರೈ ತಲುಪಿದ ದೆಹಲಿಯ ವಿಶೇಷ ಸೆಲ್‌ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ದೆಹಲಿಗೆ ಕರೆದೊಯ್ದಿದ್ದಾರೆ. ಈ ಘಟನೆಯ ನಂತರ ಅತುಲ್ ಮನೆಯಲ್ಲಿ ಮೌನ ಆವರಿಸಿದೆ.

ಜಲೌನ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿರುವ ಅತುಲ್ ಕುಲಶ್ರೇಷ್ಠ ಬಚ್ಚಾ ಸಂಸತ್ತಿಗೆ ನುಗ್ಗಿದ ಆರೋಪಿಗಳೊಂದಿಗೆ ಫೇಸ್‌ಬುಕ್‌ನಲ್ಲಿ ಚಾಟ್ ಮಾಡಿದ ಭಗತ್ ಸಿಂಗ್ ಫ್ಯಾನ್ಸ್ ಕ್ಲಬ್‌ನೊಂದಿಗೆ ಸಂಬಂಧ ಹೊಂದಿದ್ದಾರೆ. ಅತುಲ್ ಕುಲಶ್ರೇಷ್ಠ ಅವರು ತಮ್ಮ ವಿದ್ಯಾರ್ಥಿ ಜೀವನದಿಂದಲೂ ಶಹೀದ್ ಆಜಮ್ ಸರ್ದಾರ್ ಭಗತ್ ಸಿಂಗ್ ಅವರ ಸಿದ್ಧಾಂತದೊಂದಿಗೆ ಸಂಬಂಧ ಹೊಂದಿದ್ದಾರೆ. ಆತ ಅನೇಕ ಬಾರಿ ಸೆಮಿನಾರ್‌ಗಳು ಮತ್ತು ಸಭೆಗಳಲ್ಲಿ ಭಾಗವಹಿಸಿದ್ದನು. ಆದರೆ ಆತ ಯಾವುದೇ ಕ್ರಿಮಿನಲ್ ದಾಖಲೆಯನ್ನು ಹೊಂದಿಲ್ಲ. ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ.

ಸಂಸತ್ತಿಗೆ ನುಗ್ಗಿದ ಆರೋಪಿಗಳೊಂದಿಗೆ ಚಾಟ್ ಮಾಡಿದ್ದರಿಂದ ದೆಹಲಿ ಪೊಲೀಸರು ಅತುಲ್ ನನ್ನು ವಶಕ್ಕೆ ಪಡೆದಿದ್ದಾರೆ. ಬಂಧನದಿಂದಾಗಿ ಮನೆ ಮತ್ತು ನೆರೆಹೊರೆಯಲ್ಲಿ ನೀರವ ಮೌನ ಆವರಿಸಿದೆ. ಬಚ್ಚಾ ಕುಲಶ್ರೇಷ್ಠ ಬಂಧನ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ದೆಹಲಿ ಪೊಲೀಸರು ಬಂಧಿಸಿರುವ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಮಂಗಳವಾರ ಸಂಜೆ ದೆಹಲಿ ಪೊಲೀಸರು ಬಂದಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಮತ್ತು ಆತನ ಹೆಸರು ಅತುಲ್ ಕುಲಶ್ರೇಷ್ಠ ಎಂದು ಜಲೌನ್ ಎಸ್ಪಿ ಡಾ. ಇರಾಜ್ ರಾಜಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT