ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ 
ದೇಶ

ಮತ್ತೆ ಕೊರೋನಾ ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಿ ಎಂದ ಕೇಂದ್ರ ಸರ್ಕಾರ

ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಮಾಂಡವಿಯಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೊಂದಿಗೆ (ಆರೋಗ್ಯ) ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಸಚಿವಾಲಯ ಮತ್ತು ಇತರೆ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಮನ್ಸುಖ್ ಮಾಂಡವಿಯಾ ಅವರು, ಸೋಂಕು ಕುರಿತು ಆತಂಕ ಪಡುವ ಅಗತ್ಯವಿಲ್ಲ. ಆದರೆ, ಎಚ್ಚರದಿಂದಿರಬೇಕು. ರಾಜ್ಯಗಳಿಗೆ ಕೇಂದ್ರದಿಂದ ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ಹೇಳಿದರು.

ರಾಜ್ಯಗಳು ಆಸ್ಪತ್ರೆಯ ಸನ್ನದ್ಧತೆ, ಕಣ್ಗಾವಲು ಹೆಚ್ಚಿಸುವುದು ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರುವುದು ಮುಖ್ಯವಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್‌ಗಳನ್ನು ನಡೆಸಬೇಕು. ಹಬ್ಬಗಳ ಮುನ್ನ ಸೋಂಕು ತಡೆಗಟ್ಟುವ ಕ್ರಮಗಳನ್ನು ಆಯಾ ರಾಜ್ಯಗಳು ಕೈಗೊಳ್ಳಬೇಕೆಂದು ತಿಳಿಸಿದರು.

"ನಮ್ಮ ಸನ್ನದ್ಧತೆಯಲ್ಲಿ ಕೊರತೆ ಇರಬಾರದು. ಆರೋಗ್ಯವು ರಾಜಕೀಯದ ಕ್ಷೇತ್ರವಲ್ಲ. ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳ ಬೆಂಬಲಕ್ಕೆ ನಿಲ್ಲಲಿದೆ. ಎಲ್ಲಾ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವ ಸಮಯವಾಗಿದೆ ಇದಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT