ಮಲ್ಲಿಕಾರ್ಜುನ ಖರ್ಗೆ 
ದೇಶ

ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೇ?: ಧನಕರ್‌ ಗೆ ಖರ್ಗೆ ಪ್ರಶ್ನೆ

ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯಸಭಾ ಅಧ್ಯಕ್ಷರೂ ಆಗಿರುವ ಧನಕರ್ ಅವರು, ತಾನು ರೈತ ಮತ್ತು 'ಜಾಟ್' (ಅವರ ಜಾತಿ) ಎಂಬ ಕಾರಣಕ್ಕೆ ತಮ್ಮ ಬಗ್ಗೆ ಮಿಮಿಕ್ರಿ ಮಾಡಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದರು. ಆಡಳಿತಾರೂಢ ಬಿಜೆಪಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಇತರ ಸದಸ್ಯರಿಗೆ ರಕ್ಷಣೆ ನೀಡುವುದು ಸಭಾಪತಿಯವರ ಕೆಲಸ. ಆದರೆ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

"ರಾಜ್ಯಸಭೆಯಲ್ಲಿ ಆಗಾಗ ಮಾತನಾಡಲು ನನಗೆ ಅವಕಾಶ ನೀಡುವುದಿಲ್ಲ. ಆದರೆ ನಾನು ದಲಿತ ಎಂಬ ಕಾರಣಕ್ಕೆ ಹೀಗೆ ಮಾಡುತ್ತಾರೆ ಎಂದು ಹೇಳಬೇಕೇ?" ಎಂದು ಪ್ರಶ್ನಿಸಿದರು. ಸದನದ ಒಳಗೆ ಜಾತಿಯ ಬಗ್ಗೆ ಮಾತನಾಡುವ ಮೂಲಕ ಹೊರಗಿನವರನ್ನು ಪ್ರಚೋದಿಸಬಾರದು ಎಂದಿದ್ದಾರೆ.

ಸಾಂವಿಧಾನಿಕ ಉನ್ನತ ಸ್ಥಾನದಲ್ಲಿರುವವರು ತಮ್ಮ ಜಾತಿಯ ಬಗ್ಗೆ ಮಾತನಾಡುತ್ತಿರುವುದು ಅತ್ಯಂತ ದುಃಖಕರ ವಿಚಾರ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT