ಪ್ರಾತಿನಿಧಿಕ ಚಿತ್ರ 
ದೇಶ

ಕೊರೊನಾ ವೈರಸ್: 24 ಗಂಟೆಗಳಲ್ಲಿ ದೇಶದಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್; 21 ಜೆಎನ್.1 ಪ್ರಕರಣ ಪತ್ತೆ

ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 594 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿವೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 594 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,669ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿವೆ.

ಸದ್ಯ ದೇಶದಲ್ಲಿ ವರದಿಯಾಗಿರುವ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,06,572) ಆಗಿದೆ.

ಇದೇ ವೇಳೆ ಈವರೆಗೆ 5,33,327 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ ಆರು ಜನರು ಮೃತಪಟ್ಟಿದ್ದು, ಈ ಪೈಕಿ ಕೇರಳದ ಮೂವರು, ಕರ್ನಾಟಕದ ಇಬ್ಬರು ಮತ್ತು ಪಂಜಾಬ್‌ನ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಾದ ಅಂಕಿಅಂಶಗಳು ತಿಳಿಸಿವೆ.

ಕೋವಿಡ್‌ನಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 4,44,70,576ಕ್ಕೆ ಏರಿಕೆಯಾಗಿದೆ.

ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.81 ರಷ್ಟಿದ್ದು, ಮರಣ ಪ್ರಮಾಣ ಶೇ 1. 19 ರಷ್ಟಿದೆ.

ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಭಾರತದಲ್ಲಿ 21 ಜೆಎನ್.1 ಪ್ರಕರಣ ಪತ್ತೆ

ಕೊರೊನಾವೈರಸ್‌ ಸೋಂಕಿನ ಉಪತಳಿ JN.1 ರ 21 ಪ್ರಕರಣಗಳು ದೇಶದಾದ್ಯಂತ ಪತ್ತೆಯಾಗಿವೆ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪಾಲ್ ತಿಳಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಜಿನೋಮ್‌ ಸೀಕ್ವೆನ್ಸಿಂಗ್‌ನಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು. 

ಪತ್ತೆಯಾಗಿರುವ 21 ಪ್ರಕರಣಗಳ ಪೈಕಿ ಗೋವಾದಲ್ಲಿ 19 ಮತ್ತು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT