ಲಾಲು ಪ್ರಸಾದ್ ಯಾದವ್ - ತೇಜಸ್ವಿ ಯಾದವ್ 
ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ತೇಜಸ್ವಿ ಯಾದವ್, ಲಾಲು ಪ್ರಸಾದ್ ಯಾದವ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಅಡಿ ಡಿಸೆಂಬರ್ 22 ರಂದು ದೆಹಲಿಯ ಕಚೇರಿಯಲ್ಲಿ ಕೇಂದ್ರ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ (34) ಅವರನ್ನು ಕೇಳಿದ್ದರೆ, ಲಾಲು ಪ್ರಸಾದ್ (75) ಅವರನ್ನು ಮುಂದಿನ ವಾರ ಡಿಸೆಂಬರ್ 27 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಹಾಜರಾಗುವಂತೆ ತಿಳಿಸಲಾಗಿದೆ.

ಏಪ್ರಿಲ್ 11 ರಂದು ಈ ಪ್ರಕರಣದಲ್ಲಿ ಇ.ಡಿ ಸುಮಾರು ಎಂಟು ಗಂಟೆಗಳ ಕಾಲ ತೇಜಸ್ವಿ ಯಾದವ್ ಅವರನ್ನು ಒಮ್ಮೆ ವಿಚಾರಣೆಗೆ ಒಳಪಡಿಸಿದೆ. ಆದರೆ, ಲಾಲು ಪ್ರಸಾದ್ ಅವರಿಗೆ ಸಮನ್ಸ್ ನೀಡಿರುವುದು ಇದೇ ಮೊದಲು.

ಲಾಲು ಪ್ರಸಾದ್ ಕುಟುಂಬದ 'ಆಪ್ತ' ಅಮಿತ್ ಕತ್ಯಾಲ್ ಅವರ ವಿಚಾರಣೆ ನಂತರ ತೇಜಸ್ವಿ ಮತ್ತು ಲಾಲು ಪ್ರಸಾದ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ನವೆಂಬರ್‌ನಲ್ಲಿ ಇ.ಡಿಯು ಕತ್ಯಾಲ್ ಅವರನ್ನು ಬಂಧಿಸಿತ್ತು.

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ.

ಜಾಹೀರಾತು ನೀಡದೆ ಅಥವಾ ಸಾರ್ವಜನಿಕರ ಗಮನಕ್ಕೂ ತಾರದೆ ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ. ಈ ನೇಮಕಾತಿಗಾಗಿ ಭಾರತೀಯ ರೈಲ್ವೆಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.

ಮುಂಬೈ, ಜಬಲ್‌ಪುರ್, ಕೋಲ್ಕತ್ತಾ, ಜೈಪುರ ಮತ್ತು ಹಾಜಿಪುರದಲ್ಲಿರುವ ವಿವಿಧ ವಲಯ ರೈಲ್ವೆಗಳಲ್ಲಿ ಪಾಟ್ನಾದಿಂದ ಬದಲಿಗಳನ್ನು ನೇಮಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಅಭ್ಯರ್ಥಿಗಳು ನೇರವಾಗಿ ಅಥವಾ ಅವರ ಹತ್ತಿರದ ಕುಟುಂಬದ ಸದಸ್ಯರ ಮೂಲಕ ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಹೆಚ್ಚಿನ ರಿಯಾಯಿತಿ ದರದಲ್ಲಿ ಭೂಮಿಯನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT