ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಮರೆಮಾಚಲು ಏನೂ ಇಲ್ಲ: ಇಡಿ ಸಮನ್ಸ್ ಗೆ ಕೇಜ್ರಿವಾಲ್ ಪ್ರತಿಕ್ರಿಯೆ

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಮೂಲಕ ಬದುಕಿದ್ದು, ಮರೆಮಾಚಲು ಏನೂ ಇಲ್ಲ ಎಂದು ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಗೆ ಬರೆದಿರುವ ಪತ್ರದಲ್ಲಿ ಉತ್ತರಿಸಿದ್ದಾರೆ. ಯಾವುದೇ ಕಾನೂನಾತ್ಮಕ ಸಮನ್ಸ್ ಸ್ವೀಕರಿಸಲು ಅವರು ಸಿದ್ದರಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. 

ಆಮ್ ಆದ್ಮಿ ಪಕ್ಷದ ನಾಯಕನಿಗೆ ಮೊದಲು ನವೆಂಬರ್ 2 ರಂದು ಸಮನ್ಸ್ ನೀಡಿ ವಿಚಾರಣೆಗೆ ಕರೆಯಲಾಗಿತ್ತು. ಆದರೆ ಅವರು ಆ ಕರೆಯನ್ನು ತಿರಸ್ಕರಿಸಿ, ಮಧ್ಯಪ್ರದೇಶ ಚುನಾವಣೆಗೆ ಪ್ರಚಾರ ಮಾಡಲು ಆಯ್ಕೆ ಮಾಡಿದ್ದರು. ಆಮ್ ಆದ್ಮಿ ಪಕ್ಷವು ಸಮನ್ಸ್‌ನ ಸಮಯವನ್ನು ಪ್ರಶ್ನಿಸಿದ್ದು, ಪಕ್ಷದ ವಕೀಲರು ನೋಟಿಸ್  ಅಧ್ಯಯನ ಮಾಡುತ್ತಿದ್ದಾರೆ ಮತ್ತು "ಕಾನೂನುಬದ್ಧ" ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?