ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಮರೆಮಾಚಲು ಏನೂ ಇಲ್ಲ: ಇಡಿ ಸಮನ್ಸ್ ಗೆ ಕೇಜ್ರಿವಾಲ್ ಪ್ರತಿಕ್ರಿಯೆ

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಮೂಲಕ ಬದುಕಿದ್ದು, ಮರೆಮಾಚಲು ಏನೂ ಇಲ್ಲ ಎಂದು ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಗೆ ಬರೆದಿರುವ ಪತ್ರದಲ್ಲಿ ಉತ್ತರಿಸಿದ್ದಾರೆ. ಯಾವುದೇ ಕಾನೂನಾತ್ಮಕ ಸಮನ್ಸ್ ಸ್ವೀಕರಿಸಲು ಅವರು ಸಿದ್ದರಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. 

ಆಮ್ ಆದ್ಮಿ ಪಕ್ಷದ ನಾಯಕನಿಗೆ ಮೊದಲು ನವೆಂಬರ್ 2 ರಂದು ಸಮನ್ಸ್ ನೀಡಿ ವಿಚಾರಣೆಗೆ ಕರೆಯಲಾಗಿತ್ತು. ಆದರೆ ಅವರು ಆ ಕರೆಯನ್ನು ತಿರಸ್ಕರಿಸಿ, ಮಧ್ಯಪ್ರದೇಶ ಚುನಾವಣೆಗೆ ಪ್ರಚಾರ ಮಾಡಲು ಆಯ್ಕೆ ಮಾಡಿದ್ದರು. ಆಮ್ ಆದ್ಮಿ ಪಕ್ಷವು ಸಮನ್ಸ್‌ನ ಸಮಯವನ್ನು ಪ್ರಶ್ನಿಸಿದ್ದು, ಪಕ್ಷದ ವಕೀಲರು ನೋಟಿಸ್  ಅಧ್ಯಯನ ಮಾಡುತ್ತಿದ್ದಾರೆ ಮತ್ತು "ಕಾನೂನುಬದ್ಧ" ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT