ಡಿಕೆ ಸುರೇಶ್ 
ದೇಶ

ಇಂದು ಡಿಕೆ ಸುರೇಶ್ ಸೇರಿ ಮೂವರು ಸಂಸದರ ಅಮಾನತು: ಸಸ್ಪೆಂಡ್ ಆದವರ ಸಂಖ್ಯೆ 146ಕ್ಕೆ ಏರಿಕೆ

ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.

ನವದೆಹಲಿ: ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿ ಕೆ ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪ ಮಂಡಿಸಿದರು.

ದೀಪಕ್ ಬೈಜ್, ಡಿ ಕೆ ಸುರೇಶ್, ನಕುಲ್ ನಾಥ್ ಅವರು ಸದನದ ಬಾವಿಗೆ ಇಳಿದು ಸದನದಲ್ಲಿ ಫಲಕಗಳನ್ನು ಪ್ರದರ್ಶಿಸುವ ಮೂಲಕ ಅಶಿಸ್ತಿನಿಂದ ವರ್ತಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಈ ಸದನ ಅವರನ್ನು ಸದನದಿಂದ ಅಮಾನತುಗೊಳಿಸಬಹುದು ಎಂದು ಜೋಶಿ ಹೇಳಿದರು.

ಇದಕ್ಕೂ ಮುನ್ನ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು, ಸದನದಲ್ಲಿ ಪ್ರತಿಭಟನೆ ನಡೆಸದಂತೆ ಈ ಮೂವರು ಸಂಸದರಿಗೆ ಎಚ್ಚರಿಕೆ ನೀಡಿದ್ದರು.

ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯ ಸಂಸದರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಪ್ರತಿಪಕ್ಷ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು ಮತ್ತು ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಇದುವರೆಗೆ ಲೋಕಸಭೆಯಿಂದ 100 ಸಂಸದರನ್ನು ಹಾಗೂ ರಾಜ್ಯಸಭೆಯಿಂದ 46 ಸಂಸದರನ್ನು ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT