ಚಿದಂಬರಂ 
ದೇಶ

ಜನ ಎಂದಾದರೂ ಮಹಾತ್ಮ ಗಾಂಧಿಯ ಜಾತಿ ಕೇಳಿದ್ದಾರೆಯೇ?: ಧನಕರ್ ವಿರುದ್ಧ ಚಿದಂಬರಂ ವಾಗ್ದಾಳಿ

ಸಂಸತ್ತಿನಲ್ಲಿ ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಜಾತಿಯನ್ನು ಪ್ರಸ್ತಾಪಿಸುತ್ತಿರುವುದು ನಿರಾಶಾದಾಯಕ ಎಂದ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು, 21ನೇ ಶತಮಾನದಲ್ಲಿ ಈ "ಸಂಕುಚಿತ ಮನೋಭಾವ"ಗಳನ್ನು ಮೀರಿ...

ನವದೆಹಲಿ: ಸಂಸತ್ತಿನಲ್ಲಿ ಗಂಭೀರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಜಾತಿಯನ್ನು ಪ್ರಸ್ತಾಪಿಸುತ್ತಿರುವುದು ನಿರಾಶಾದಾಯಕ ಎಂದ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು, 21ನೇ ಶತಮಾನದಲ್ಲಿ ಈ "ಸಂಕುಚಿತ ಮನೋಭಾವ"ಗಳನ್ನು ಮೀರಿ ನಡೆಯುವಂತೆ ಜನರಿಗೆ ಕರೆ ನೀಡಿದ್ದಾರೆ.

ಸಂಸದರ ಅಮಾನತು ವಿರೋಧಿಸಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ತಮ್ಮನ್ನು ಅಪಹಾಸ್ಯ ಮಾಡಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ತಾವು ಜಾಟ್(ಅವರ ಜಾತಿ) ಎಂಬ ಕಾರಣಕ್ಕೆ ಅವಮಾನ ಮಾಡಲಾಗುತ್ತಿದೆ ಎಂದಿದ್ದರು.

ಸಂಸತ್ತಿನಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ‘ಜಾತಿ’ಯನ್ನು ಪ್ರಸ್ತಾಪಿಸಿರುವುದು ತೀವ್ರ ನಿರಾಶಾದಾಯಕ. ಮತ್ತೊಬ್ಬ ವ್ಯಕ್ತಿಯನ್ನು ಟೀಕಿಸಲು ತಮ್ಮ ‘ಹುಟ್ಟಿದ ಸ್ಥಳ’ವನ್ನು ಬಳಸಿರುವುದು ಖಂಡನೀಯ ಎಂದು ಚಿದಂಬರಂ ಅವರು  X ನಲ್ಲಿ ಪೋಸ್ಟ್ ಮಾಡಿದ್ದಾರೆ.

"ಮಹಾತ್ಮ ಗಾಂಧಿ ಅಥವಾ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಾತಿ ಅಥವಾ ಸಿ.ಎಫ್. ಆಂಡ್ರ್ಯೂಸ್ ಅಥವಾ ಆನಿ ಬೆಸೆಂಟ್ ಅವರ ಜನ್ಮಸ್ಥಳದ ಬಗ್ಗೆ ಯಾರಾದರೂ ಕೇಳಿದರೆ ಬಗ್ಗೆ ನನಗೆ ನೆನಪಿಲ್ಲ. ಈ ಸಂಕುಚಿತ ಮನೋಭಾವವನ್ನು ಮೀರಿ 21ನೇ ಶತಮಾನದಲ್ಲಿ ನಾವು ಮಾನವೀಯತೆಯ ಮಾನದಂಡಗಳು ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬಹುದೇ? ಎಂದು ಮಾಜಿ ಕೇಂದ್ರ ಸಚಿವ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT