ಪಿ ಚಿದಂಬರಂ 
ದೇಶ

ಚಿದಂಬರಂ ಅಧ್ಯಕ್ಷತೆಯಲ್ಲಿ 2024ರ ಲೋಕಸಭೆ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ!

2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಲು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯನ್ನು ರಚಿಸಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ನೇತೃತ್ವದ 16 ಸದಸ್ಯರ ಸಮಿತಿಯಲ್ಲಿ ಹಿರಿಯ ನಾಯಕರು, ಪಕ್ಷದ ಎರಡನೇ ಸಾಲಿನ ನಾಯಕರಿಗೆ ಸ್ಥಾನ ನೀಡಲಾಗಿದೆ.

ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್‌ದೇವ್ ಅವರನ್ನು ಚುನಾವಣಾ ಪ್ರಣಾಳಿಕೆ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಶಶಿ ತರೂರ್, ಜೈರಾಮ್ ರಮೇಶ್, ಆನಂದ್ ಶರ್ಮಾ, ರಂಜಿತ್ ರಂಜನ್, ಜಿಗ್ನೇಶ್ ಮೇವಾನಿ ಸೇರಿದಂತೆ ಹಲವು ನಾಯಕರನ್ನು ಸಮಿತಿಯಲ್ಲಿ ಸೇರಿಸಲಾಗಿದೆ.

ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಲು ಪಕ್ಷವು ಶೀಘ್ರದಲ್ಲೇ ಸಮಿತಿಗಳನ್ನು ರಚಿಸಲಿದೆ ಎಂದು ಹೇಳಿದ್ದರು. ಲೋಕಸಭೆ ಸ್ಥಾನಕ್ಕೆ ವೀಕ್ಷಕರನ್ನು ನೇಮಿಸುವುದರ ಜೊತೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷವು ಸ್ಕ್ರೀನಿಂಗ್ ಸಮಿತಿಯನ್ನು ಸಹ ರಚಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT