ಅರವಿಂದ್ ಕೇಜ್ರಿವಾಲ್ 
ದೇಶ

ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಇಡಿಯಿಂದ ಮೂರನೇ ಸಮನ್ಸ್: ಜನವರಿ 3ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ

ಈಗ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿಗೆ ಮೂರನೇ ಸಮನ್ಸ್ ನೀಡಿದೆ. ಜನವರಿ 3 ರಂದು ಏಜೆನ್ಸಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ.

ನವದೆಹಲಿ: ಈಗ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿಗೆ ಮೂರನೇ ಸಮನ್ಸ್ ನೀಡಿದೆ. ಜನವರಿ 3 ರಂದು ಏಜೆನ್ಸಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ.

ಮೂರನೆಯ ಸಮನ್ಸ್ ಕೇಜ್ರಿವಾಲ್ ಮುಂದೆ ಇರುವ ಆಯ್ಕೆಗಳನ್ನು ಕಡಿಮೆ ಮಾಡುತ್ತದೆ. ಹಿಂದಿನ ಎರಡು ಸಂದರ್ಭಗಳಲ್ಲಿ ಅವರು ಮಾಡಿದ ರೀತಿಯಲ್ಲಿ ಅದನ್ನು ನಿರ್ಲಕ್ಷಿಸಿದರೆ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ (NBW) ಹೊರಡಿಸಲು ಇಡಿ ನ್ಯಾಯಾಲದ ಮೆಟ್ಟಿಲೇರಬಹುದು. ವ್ಯಕ್ತಿಯನ್ನು ಬಂಧಿಸಲು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಜಾಮೀನು ರಹಿತ ವಾರೆಂಟ್ ಪೊಲೀಸರಿಗೆ ಅಧಿಕಾರ ನೀಡುತ್ತದೆ. ಕೇಜ್ರಿವಾಲ್ ಕೂಡಾ ಸಮನ್ಸ್  ನ್ನುನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಮತ್ತು ನಿರೀಕ್ಷಣಾ ಜಾಮೀನು ಪಡೆಯಬಹುದು.

ಕೇಜ್ರಿವಾಲ್  ಪಂಜಾಬ್ ನಲ್ಲಿ 10 ದಿನಗಳ ವಿಪಸ್ಸನಾ ಅಧಿವೇಶನಕ್ಕೆ ಡಿಸೆಂಬರ್ 19 ರಂದು ಹೊರಡುವ ಕೆಲವು ದಿನಗಳ ಮೊದಲು ಎರಡನೇ ಸಮನ್ಸ್ ಬಂದಿತು. ಡಿಸೆಂಬರ್ 21 ರಂದು ಇಡಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಇಡಿ ಮುಂದೆ ಹಾಜರಾಗುವುದಕ್ಕಿಂತ ಧ್ಯಾನವನ್ನು ಆರಿಸಿಕೊಂಡರು. ಇಡಿ ಅಧಿಕಾರಿಗಳು ಎರಡನೇ ಸಮನ್ಸ್  ನೀಡುವ ಮೊದಲು ವಿಪಸ್ಸನಾಗೆ ದೆಹಲಿಯಲ್ಲಿ ಇಲ್ಲ, ವಿಪಸನಾಕ್ಕೆ ತೆರಳಿದ್ದಾರೆ ಎಂದು ಘೋಷಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT