ತೇಜಸ್ವಿ ಯಾದವ್ 
ದೇಶ

ತೇಜಸ್ವಿ ಯಾದವ್‌ಗೆ ಇಡಿಯಿಂದ ಮತ್ತೆ ಸಮನ್ಸ್: ಜನವರಿ 5ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ

ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಹಿಂದೆ ಡಿಸೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ನೀಡಲಾಗಿತ್ತು. ಆದರೆ ಇಡಿ ಸಮನ್ಸ್ ದಿನನಿತ್ಯದ ವ್ಯವಹಾರ ಅಂತಾ ಹೇಳಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಲಾಲು ಪ್ರಸಾದ್ ಯಾದವ್ ಅವರು ಯುಪಿಎ-1ರ ಅವಧಿಯಲ್ಲಿ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ನಡೆದಿದ್ದ ಹಗರಣ ಇದಾಗಿದೆ.

2004 ರಿಂದ 2009 ರವರೆಗೆ ಆಗಿನ ರೈಲ್ವೆ ಸಚಿವ ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಮತ್ತು ಎ ಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಕಂಪನಿಗೆ ಭೂಮಿಯನ್ನು ವರ್ಗಾಯಿಸಿದ ನಂತರ ಹಲವಾರು ಜನರಿಗೆ ವಿವಿಧ ರೈಲ್ವೇ ವಲಯಗಳಲ್ಲಿ ಗ್ರೂಪ್ 'ಡಿ' ವರ್ಗದ ಉದ್ಯೋಗಗಳನ್ನು ಹಸ್ತಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT