ಸಂಸತ್ತಿನ ಭದ್ರತಾ ಲೋಪ: ಆರೋಪಿಗಳು ಡಿಸೆಂಬರ್ 13ರಂದು ಮಾಡಿದ ಕೃತ್ಯ 
ದೇಶ

ಸಂಸತ್ ಭದ್ರತಾ ಲೋಪ: ಆರೋಪಿ ಮಹೇಶ್ ಕುಮಾವತ್ ಪೊಲೀಸ್ ಕಸ್ಟಡಿ ಜನವರಿ 5ರವರೆಗೆ ವಿಸ್ತರಣೆ

ಡಿಸೆಂಬರ್ 13ರ ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಹೇಶ್ ಕುಮಾವತ್ ಅವರ ಪೊಲೀಸ್ ಕಸ್ಟಡಿಯನ್ನು ಶನಿವಾರ ಇಲ್ಲಿನ ನ್ಯಾಯಾಲಯವು ಜನವರಿ 5 ರವರೆಗೆ ವಿಸ್ತರಿಸಿದೆ.

ನವದೆಹಲಿ: ಡಿಸೆಂಬರ್ 13ರ ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಹೇಶ್ ಕುಮಾವತ್ ಅವರ ಪೊಲೀಸ್ ಕಸ್ಟಡಿಯನ್ನು ಶನಿವಾರ ಇಲ್ಲಿನ ನ್ಯಾಯಾಲಯವು ಜನವರಿ 5 ರವರೆಗೆ ವಿಸ್ತರಿಸಿದೆ.

ದೆಹಲಿ ಪೊಲೀಸರು ಸಲ್ಲಿಸಿದ ಅರ್ಜಿಯ ಮೇರೆಗೆ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಕುಮಾವತ್ ಅವರ ಕಸ್ಟಡಿಯನ್ನು ವಿಸ್ತರಿಸಿದರು. ಸಂಪೂರ್ಣ ಷಡ್ಯಂತ್ರವನ್ನು ಬಯಲಿಗೆಳೆಯಲು ಆರೋಪಿಯನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

ಆರೋಪಿಗಳು 'ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಬಯಸಿದ್ದರು, ಇದರಿಂದಾಗಿ ಅವರು ತಮ್ಮ ಅನ್ಯಾಯದ ಮತ್ತು ಕಾನೂನುಬಾಹಿರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಬಹುದು ಎಂದುಕೊಂಡಿದ್ದರು' ಎಂದು ಪ್ರಾಸಿಕ್ಯೂಟರ್ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.

'ದಾಳಿಯ ಹಿಂದಿನ ನಿಜವಾದ ಉದ್ದೇಶದೊಂದಿಗೆ ಶತ್ರು ದೇಶ ಮತ್ತು ಭಯೋತ್ಪಾದಕ ಸಂಘಟನೆಗಳೊಂದಿಗಿನ ಆತನ ಸಂಬಂಧದ ಕುರಿತು ಕಂಡುಹಿಡಿಯಲು' ಬಂಧನದ ಅಗತ್ಯವಿದೆ ಎಂದು ಪ್ರಾಸಿಕ್ಯೂಟರ್ ಹೇಳಿದರು.

ದೆಹಲಿ ಪೊಲೀಸರ ಪ್ರಕಾರ, ಕುಮಾವತ್ ಗುರುವಾರ ರಾತ್ರಿ ಸಹ-ಆರೋಪಿ ಲಲಿತ್ ಝಾ ಅವರೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದರು. ಬಳಿಕ ಇಬ್ಬರನ್ನೂ ವಿಶೇಷ ಸೆಲ್‌ಗೆ ಹಸ್ತಾಂತರಿಸಲಾಯಿತು. ಅಂದಿನಿಂದ ಅವರ ವಿಚಾರಣೆ ನಡೆಸಲಾಗುತ್ತಿದೆ. 
ಆರೋಪಿಗಳು ರಚಿಸಿದ ಭಗತ್ ಸಿಂಗ್ ಫ್ಯಾನ್ ಕ್ಲಬ್ ಪೇಜ್‌ನ ಈಗ ಅಳಿಸಲಾದ ಪುಟದ ಸದಸ್ಯರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕುಮಾವತ್ ಅವರನ್ನು ಸಾಕ್ಷ್ಯ ನಾಶ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ ಮತ್ತು ನೀಲಂ ದೇವಿ ಅವರ ಕಸ್ಟಡಿಯನ್ನು ಜನವರಿ 5 ರವರೆಗೆ ನ್ಯಾಯಾಲಯ ಗುರುವಾರ ವಿಸ್ತರಿಸಿದೆ. ಝಾ ಅವರ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯವು ಜನವರಿ 5 ರವರೆಗೆ ಶುಕ್ರವಾರ ವಿಸ್ತರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?