ನೇಪಾಳದಿಂದ ರಾಮಮಂದಿರಕ್ಕೆ ವಿಶೇಷ ಉಡುಗೊರೆ 
ದೇಶ

ರಾಮಮಂದಿರ ಉದ್ಘಾಟನೆಗೆ ಸೀತಾಮಾತೆ ತವರು ನೇಪಾಳದಿಂದ ವಿಶೇಷ ಉಡುಗೊರೆ

ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಶ್ರೀರಾಮನ ಧರ್ಮಪತ್ನಿ ಸೀತಾಮಾತೆಯ ತವರು ನೇಪಾಳದಿಂದ ವಿಶೇಷ ಉಡುಗೊರೆಗಳು ಆಗಮಿಸುತ್ತಿವೆ.

ಅಯೋಧ್ಯೆ: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಶ್ರೀರಾಮನ ಧರ್ಮಪತ್ನಿ ಸೀತಾಮಾತೆಯ ತವರು ನೇಪಾಳದಿಂದ ವಿಶೇಷ ಉಡುಗೊರೆಗಳು ಆಗಮಿಸುತ್ತಿವೆ.

ನೇಪಾಳದಿಂದ ಅಯೋಧ್ಯೆಗೆ ವಿವಿಧ ರೀತಿಯ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳನ್ನು ಒಳಗೊಂಡ ವಿಶೇಷ ಸ್ಮಾರಕಗಳನ್ನು ಕಳುಹಿಸಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ರಾಷ್ಟ್ಪೀಯ ಮಾಧ್ಯಮಗಳು ವರದಿ ಮಾಡಿದ್ದು, ಸ್ಮರಣಿಕೆಗಳನ್ನು ವಿತರಿಸಲು ಜನಕಪುರಧಾಮ-ಅಯೋಧ್ಯಧಾಮ ಪ್ರಯಾಣವನ್ನು ಕೈಗೊಳ್ಳಲಾಗುವುದು ಎಂದು ಮೈ ರಿಪಬ್ಲಿಕಾ ಪತ್ರಿಕೆ ವರದಿ ಮಾಡಿದೆ.

ಜನವರಿ 18 ರಂದು ಪ್ರಾರಂಭವಾಗುವ ಪ್ರಯಾಣವು ಜನವರಿ 20 ರಂದು ಅಯೋಧ್ಯೆಯಲ್ಲಿ ಮುಕ್ತಾಯಗೊಳ್ಳಲಿದೆ ಮತ್ತು ಅದೇ ದಿನ ಸ್ಮಾರಕಗಳನ್ನು ಶ್ರೀ ರಾಮ ಜನ್ಮಭೂಮಿ ರಾಮಮಂದಿರ ಟ್ರಸ್ಟ್‌ಗೆ ಹಸ್ತಾಂತರಿಸಲಾಗುವುದು ಎಂದು ಜಾನಕಿ ದೇವಸ್ಥಾನದ ಜಂಟಿ ಮಹಾಂತ ರಾಮರೋಷನ್ ದಾಸ್ ವೈಷ್ಣವ್ ತಿಳಿಸಿದ್ದಾರೆ.

ಜನವರಿ 22 ರಂದು ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು, ಜನಕ್‌ಪುರಧಾಮ್‌ನಿಂದ ಜಲೇಶ್ವರ ನಾಥ್, ಮಲಂಗ್ವಾ, ಸಿಮ್ರೌಂಗಧ್, ಗಧಿಮಾಯಿ, ಬಿರ್‌ಗುಂಜ್ ಮೂಲಕ ಬೇಟಿಯಾ, ಕುಶಿನಗರ, ಸಿದ್ಧಾರ್ಥನಗರ, ಗೋರಖ್‌ಪುರ ಮಾರ್ಗವಾಗಿ ಉತ್ತರ ಪ್ರದೇಶದ ಅಯೋಧ್ಯೆ ತಲುಪಲಿದೆ.

ಇದಕ್ಕೂ ಮುನ್ನ ನೇಪಾಳದ ಕಾಳಿಗಂಡಕಿ ನದಿ ದಡದಿಂದ ಸಂಗ್ರಹಿಸಿದ ಶಾಲಿಗ್ರಾಮ ಕಲ್ಲುಗಳನ್ನು ಶ್ರೀರಾಮನ ಪ್ರತಿಮೆ ಮಾಡಲು ಅಯೋಧ್ಯೆಗೆ ಕಳುಹಿಸಲಾಗಿದ್ದು, ಉದ್ಘಾಟನಾ ದಿನದಂದು ಅದನ್ನು ದೇವಾಲಯದಲ್ಲಿ ಸ್ಥಾಪಿಸಲಾಗುವುದು ಎಂದು ಪತ್ರಿಕೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT