ಸಾಂದರ್ಭಿಕ ಚಿತ್ರ 
ದೇಶ

ಭಾರತದಲ್ಲಿ ಬಂಧನಕ್ಕೆ ಒಳಗಾಗಿರುವ ವಿವೋ ಉದ್ಯೋಗಿಗಳ ನೆರವಿಗೆ ಚೀನಾ ಮುಂದು

ಭಾರತದಲ್ಲಿ ಬಂಧನಕ್ಕೆ ಒಳಗಾಗಿರುವ ವಿವೋ ಸಂಸ್ಥೆಯ ಉದ್ಯೋಗಿಗಳೆ ನೆರವಿಗೆ ಧಾವಿಸಲು ಚೀನಾ ಮುಂದಾಗಿದೆ.

ನವದೆಹಲಿ: ಭಾರತದಲ್ಲಿ ಬಂಧನಕ್ಕೆ ಒಳಗಾಗಿರುವ ವಿವೋ ಸಂಸ್ಥೆಯ ಉದ್ಯೋಗಿಗಳ ನೆರವಿಗೆ ಧಾವಿಸಲು ಚೀನಾ ಮುಂದಾಗಿದೆ.

ವಿವೋ ಚೀನಾ ದೇಶದ ಸ್ಮಾರ್ಟ್ ಫೋನ್ ತಯಾರಿಕಾ ಸಂಸ್ಥೆಯಾಗಿದೆ. ತನ್ನ ದೇಶದ ಸಂಸ್ಥೆಯ ಉದ್ಯಮ ಹಾಗೂ ಉದ್ಯೋಗಿಗಳ ಕಾನೂನು ಬದ್ಧ ಹಕ್ಕು ಹಾಗೂ ಹಿತಾಸಕ್ತಿಗಳನ್ನು ರಕ್ಷಿಸುವುದಾಗಿ ಹೇಳಿದೆ. ಜಾರಿ ನಿರ್ದೇಶನಾಲಯ ಕಳೆದ ವಾರ ಚೀನಾದ ಸ್ಮಾರ್ಟ್‌ಫೋನ್ ತಯಾರಕ ಮತ್ತು ಇತರ ಕೆಲವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಮೂವರು ವಿವೋ-ಇಂಡಿಯಾ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಬಂಧಿಸಿದೆ.

ಬಂಧನಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್, ಚೀನಾ ಈ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ದಾರೆ. ಭಾರತದಲ್ಲಿನ ಚೀನೀ ರಾಯಭಾರ ಕಚೇರಿ ಮತ್ತು ದೂತಾವಾಸಗಳು ಕಾನೂನಿಗೆ ಅನುಸಾರವಾಗಿ ಸಂಬಂಧಿಸಿದ ವ್ಯಕ್ತಿಗಳಿಗೆ ಕಾನ್ಸುಲರ್ ರಕ್ಷಣೆ ಮತ್ತು ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತವೆ ಎಂದು ಅವರು ಹೇಳಿದ್ದಾರೆ.

ನಮ್ಮ ಉಭಯ ದೇಶಗಳ ನಡುವಿನ ವ್ಯಾಪಾರ ಸಹಕಾರದ ಪರಸ್ಪರ ಪ್ರಯೋಜನಕಾರಿ ಸ್ವರೂಪವನ್ನು ಭಾರತವು ಸಂಪೂರ್ಣವಾಗಿ ಗುರುತಿಸುತ್ತದೆ ಮತ್ತು ನ್ಯಾಯಯುತ, ಪಾರದರ್ಶಕ ಮತ್ತು ತಾರತಮ್ಯವಿಲ್ಲದ ವ್ಯಾಪಾರ ವಾತಾವರಣವನ್ನು ಒದಗಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು.

ವಿವೋ-ಇಂಡಿಯಾ ಹಂಗಾಮಿ ಸಿಇಒ ಹಾಂಗ್ ಕ್ಸುಕ್ವಾನ್ ಅಲಿಯಾಸ್ ಟೆರ್ರಿ -- ಚೀನಾ ಪ್ರಜೆ - ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಹರಿಂದರ್ ದಹಿಯಾ ಮತ್ತು ಸಲಹೆಗಾರ ಹೇಮಂತ್ ಮುಂಜಾಲ್ ಅವರನ್ನು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT