ಕೊಲೆಯಾದ ನಂದಿನಿ ಹಾಗೂ ಆರೋಪಿ ವೆಟ್ರಿಮಾರನ್ 
ದೇಶ

ವಿವಾಹಕ್ಕೆ ಒಪ್ಪದ ಬಾಲ್ಯದ ಗೆಳತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಟ್ರಾನ್ಸ್​ಜೆಂಡರ್!

ಸ್ನೇಹಿತೆಗಾಗಿ ಗಂಡಾಗಿ ಬದಲಾಗಿದ್ದ ವ್ಯಕ್ತಿಯೊಬ್ಬ ತನ್ನ 25 ವರ್ಷದ ಬಾಲ್ಯದ ಗೆಳತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಚೆನ್ನೈ: ಸ್ನೇಹಿತೆಗಾಗಿ ಗಂಡಾಗಿ ಬದಲಾಗಿದ್ದ ವ್ಯಕ್ತಿಯೊಬ್ಬ ತನ್ನ 25 ವರ್ಷದ ಬಾಲ್ಯದ ಗೆಳತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಬೇರೆಯವರ ಜೊತೆ ಸಲುಗೆಯಿಂದ ಇರುವುದರಿಂದ ಕೋಪಗೊಂಡು ಆಕೆಯನ್ನು ಅತ್ಯಂತ ಕ್ರೂರವಾಗಿ ಕೊಂದಿದ್ದಾನೆ. ಸರಪಳಿಯಲ್ಲಿ ಕಟ್ಟಿ, ಬ್ಲೇಡ್ ನಿಂದ ಕೊಯ್ದು, ಮೈಮೇಲೆ ಪೆಟ್ರೋಲ್ ಸುರಿದು ಜೀವಂತವಾಗಿ ಬೆಂಕಿ ಹಚ್ಚಿದ್ದಾನೆ. ತಮಿಳುನಾಡು ರಾಜ್ಯದ ರಾಜಧಾನಿ ಚೆನ್ನೈ ಸಮೀಪದ ತಲಂಬೂರಿನಲ್ಲಿ ಈ ಭಯಾನಕ ಘಟನೆ ನಡೆದಿದೆ. ಈ ಭೀಕರ ಹತ್ಯೆ ತಮಿಳುನಾಡಿನಾದ್ಯಂತ ಭಾರೀ ಸಂಚಲನ ಮೂಡಿಸಿದೆ.

ಸಾಫ್ಟ್ ವೇರ್ ಉದ್ಯೋಗಿ ನಂದಿನಿಯನ್ನ (25) ವೆಟ್ರಿಮಾರನ್ (26) ಪ್ರೀತಿಸುತ್ತಿದ್ದ. ಇಬ್ಬರೂ ಮಧುರೈನಲ್ಲಿ ಒಂದೇ ಪ್ರೌಢಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಎಂಟು ತಿಂಗಳ ಹಿಂದೆಯಷ್ಟೇ ಇಬ್ಬರೂ ಒಂದೇ ಸಾಫ್ಟ್​ವೇರ್​ ಕಂಪನಿಗೆ ಸೇರಿದ್ದರು. ಇಬ್ಬರು ಒಟ್ಟಿಗೆ ವಾಸಿಸುತ್ತಿದ್ದರಿಂದ ನಂದಿನಿಯನ್ನ ಮದುವೆಯಾಗುವುದಾಗಿ ವೆಟ್ರಿ ಮಾರನ್​ ಕೇಳಿಕೊಂಡಿದ್ದಾನೆ, ಆದರೆ ನಂದಿನಿ ಒಪ್ಪಿರಲಿಲ್ಲ. ಹಾಗಾಗಿ ಆಕೆಯನ್ನ ಕೊಲೆ ಮಾಡುವ ನಿರ್ಧಾರ ಕೈಗೊಂಡಿದ್ದಾನೆ.

ನಂದಿನಿ ಮದುವೆಗೆ ಒಪ್ಪದಿರಲು ಪ್ರಮುಖ ಕಾರಣ ವೇಟ್ರಿಮಾರನ್​ ಒಬ್ಬ ಟ್ರಾನ್ಸ್​ಜೆಂಡರ್. ಆತನ ಮೊದಲ ಹೆಸರು ಪಾಂಡಿ ಮಹೇಶ್ವರಿ. ಈ ಇಬ್ಬರು ಚಿಕ್ಕಂದಿನಿಂದಲೂ ಒಟ್ಟಿಗೆ ಓದಿದ್ದರು. ಮಹೇಶ್ವರಿ ವೇಟ್ರಿ ಮಾರನ್​ ಅಗಿ ಬದಲಾದ ನಂತರ ನಂದಿನಿಯನ್ನು ವಿವಾಹವಾಗಲು ಬಯಸಿದ್ದಾನೆ. ಆದರೆ ನಂದಿನಿ ಅದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಕಳೆದ 6 ತಿಂಗಳಿನಿಂದ ಬೇರೆ ಯುವಕನ ಜೊತೆಗೆ ಸಲುಗೆಯಿಂದ ವರ್ತಿಸಲು ಶುರು ಮಾಡಿದ್ದಳು. ಹಾಗಾಗಿ ಆಕೆಯನ್ನು ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ನಂದಿನಿ ಹುಟ್ಟುಹಬ್ಬದ ದಿನವಾದ ಶನಿವಾರ, ಆರೋಪಿ ವೆಟ್ರಿಮಾರನ್​ ಆಕೆಗೆ ಸರ್ಪ್ರೈಸ್ ನೀಡುವುದಾಗಿ ಹೇಳಿ ಹೊರಗೆ ಕರೆದೊಯ್ದಿದ್ದ. ಆರೋಪಿ ಆಕೆಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಕಟ್ಟಿಹಾಕಿ ಬ್ಲೇಡ್‌ನಿಂದ ಗಾಯಗೊಳಿಸಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT