ಪ್ರಧಾನಿ ಮೋದಿ 
ದೇಶ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತರ ಪಾತ್ರವನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ದೇಶ ನಿರ್ಮಾಣದಲ್ಲಿ ಕ್ರೈಸ್ತ ಸಮುದಾಯದ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಬಡವರು ಮತ್ತು ವಂಚಿತರ ಸೇವೆಗೆ ಸದಾ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.  

ನವದೆಹಲಿ: ದೇಶ ನಿರ್ಮಾಣದಲ್ಲಿ ಕ್ರೈಸ್ತ ಸಮುದಾಯದ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಬಡವರು ಮತ್ತು ವಂಚಿತರ ಸೇವೆಗೆ ಸದಾ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ. 

ಕ್ರಿಸ್‌ಮಸ್ ಸಂದರ್ಭದಲ್ಲಿ ತಮ್ಮ ನಿವಾಸದಲ್ಲಿ ಸಮುದಾಯದ ಗಣ್ಯರಿಗೆ ಆತಿಥ್ಯ ನೀಡಿ, ಪವಿತ್ರ ಬೈಬಲ್‌ನ ಒಂದು ಶ್ಲೋಕವನ್ನು ಉಲ್ಲೇಖಿಸಿದ ಪ್ರಧಾನಿ, ದೇವರು ನೀಡಿದ ಯಾವುದೇ ಉಡುಗೊರೆಯನ್ನು ಇತರರ ಸೇವೆಗೆ ಬಳಸಿಕೊಳ್ಳಬೇಕು" ಎಂದು ಹೇಳಿದರು. 

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸೇಂಟ್ ಸ್ಟೀಫನ್ಸ್ ಕಾಲೇಜಿನ ಪ್ರಾಂಶುಪಾಲರಾದ ಸುಶೀಲ್ ಕುಮಾರ್ ರುದ್ರ ಅವರ ಆಶ್ರಯದಲ್ಲಿ ಅಸಹಕಾರ ಚಳವಳಿಯನ್ನು ರೂಪಿಸಲಾಯಿತು ಎಂದು ಸ್ವತಃ ಗಾಂಧೀಜಿ ಹೇಳಿದ್ದರು."ಇಂದಿಗೂ, ಕ್ರಿಶ್ಚಿಯನ್ ಸಮುದಾಯದ ಸಂಸ್ಥೆಗಳು ಶಿಕ್ಷಣ ಮತ್ತು ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ ದೊಡ್ಡ ಕೊಡುಗೆಯನ್ನು ನೀಡುತ್ತಿವೆ" ಎಂದು ಅವರು ಹೇಳಿದರು.

ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಸೇವೆಗಳನ್ನು ಶ್ಲಾಘಿಸಿದ ಮೋದಿ, ಮುಂದಿನ ಪೀಳಿಗೆಗೆ ಭೂಮಿಯನ್ನು ಉತ್ತಮ ಗ್ರಹವನ್ನಾಗಿ ಮಾಡಲು ಸಮುದಾಯವನ್ನು ವಿನಂತಿಸಿದರು. ಕ್ರಿಸ್‌ಮಸ್‌ಗೆ ಉಡುಗೊರೆಗಳನ್ನು ನೀಡುವ ಸಂಪ್ರದಾಯವಿದೆ. ಭವಿಷ್ಯದ ಪೀಳಿಗೆಗೆ ನಾವು ಹೇಗೆ ಉತ್ತಮ ಗ್ರಹವನ್ನು ಉಡುಗೊರೆಯಾಗಿ ನೀಡಬಹುದು ಎಂಬುದನ್ನು ಪರಿಗಣಿಸಲು ಈ ಅವಕಾಶವನ್ನು ಬಳಸಿಕೊಳ್ಳೋಣ ಎಂದರು. 

ಸುಸ್ಥಿರತೆಯು ಇಂದಿನ ಸಮಯದ ಅಗತ್ಯವಾಗಿದೆ ಮತ್ತು ಸುಸ್ಥಿರ ಜೀವನಶೈಲಿಯನ್ನು ಜೀವಿಸುವುದು ಮಿಷನ್ ಲೈಫ್‌ನ ಕೇಂದ್ರ ಸಂದೇಶವಾಗಿದೆ, ”ಎಂದು ಪ್ರಧಾನ ಮಂತ್ರಿ ಪ್ರತಿಪಾದಿಸಿದರು. ಮಿಷನ್ ಲೈಫ್ ಈಗ ಅಂತರರಾಷ್ಟ್ರೀಯ ಆಂದೋಲನವಾಗಿದ್ದು, ಗ್ರಹದ ಪರವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಭಾರತವನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT