ಶಕ್ತಿಕಾಂತ್ ದಾಸ್ ಮತ್ತು ನಿರ್ಮಲಾ ಸೀತಾರಾಮನ್ 
ದೇಶ

ಶಕ್ತಿಕಾಂತ್ ದಾಸ್, ನಿರ್ಮಲಾ ಸೀತಾರಾಮನ್ ರಾಜಿನಾಮೆ ನೀಡಬೇಕು, ಇಲ್ಲ 11 ಸ್ಥಳಗಳಲ್ಲಿ ಸ್ಫೋಟ: ಆರ್ ಬಿಐಗೆ ಬೆದರಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ರಾಜಿನಾಮೆ ನೀಡದಿದ್ದರೆ ದೇಶದ 11 ಪ್ರದೇಶಗಳಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ.

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ರಾಜಿನಾಮೆ ನೀಡದಿದ್ದರೆ ದೇಶದ 11 ಪ್ರದೇಶಗಳಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ.

ಆರ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಕಚೇರಿಗಳ ಮೇಲೆ ಬಾಂಬ್​ ದಾಳಿ ನಡೆಸಲಾಗುವುದು… ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ಗೆ ಸೋಮವಾರ ಬಾಂಬ್ ಸ್ಫೋಟ ಬೆದರಿಕೆಯ ಇ-ಮೇಲ್ ಬಂದಿದೆ. ಬೆದರಿಕೆ ಇ- ಮೇಲ್ ಕಳುಹಿಸಿದವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ 1:30ಕ್ಕೆ ಮುಂಬೈನ 11 ಸ್ಥಳಗಳಲ್ಲಿ ಒಟ್ಟು 11 ಬಾಂಬ್ ದಾಳಿಗಳು ನಡೆಯಲಿವೆ ಎಂದು ಇ- ಮೇಲ್ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಇ-ಮೇಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲಾ ಸ್ಥಳಗಳಿಗೆ ಪೊಲೀಸರು ಭೇಟಿ ನೀಡಿ ತನಿಖೆಯನ್ನೂ ಕೈಗೊಂಡಿದ್ದಾರೆ. ಆದರೆ, ಬಾಂಬ್​ ಬೆದರಿಕೆ ಕುರಿತಂತೆ ಏನೂ ಕಂಡುಬಂದಿಲ್ಲ.

khilafat.india@gmail.com ಎಂಬ ಇ-ಮೇಲ್​ ಐಡಿ ಮೂಲಕ ಬೆದರಿಕೆ ಬಂದಿತ್ತು. ಮುಂಬೈನ ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

ಇ-ಮೇಲ್ ಜಾಡು ಹಿಡಿದಿ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT