ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ 
ದೇಶ

ಧರ್ಮ ವೈಯಕ್ತಿಕ ಆಯ್ಕೆ: ರಾಮ ಮಂದಿರ ಉದ್ಘಾಟನೆ ಸಮಾರಂಭದ ಆಹ್ವಾನ ತಿರಸ್ಕರಿಸಿದ ಸೀತಾರಾಮ್ ಯೆಚೂರಿ

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಕ್ಕಿದ ಆಹ್ವಾನವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಿರಸ್ಕರಿಸಿದ್ದಾರೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಎಂಬುದು ತಮ್ಮ ನಂಬಿಕೆಯಾಗಿದೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ. 

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಕ್ಕಿದ ಆಹ್ವಾನವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ತಿರಸ್ಕರಿಸಿದ್ದಾರೆ. ಧರ್ಮವು ವೈಯಕ್ತಿಕ ಆಯ್ಕೆಯಾಗಿದೆ ಎಂಬುದು ತಮ್ಮ ನಂಬಿಕೆಯಾಗಿದೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ. 

ನಮ್ಮ ನೀತಿಯು ಧಾರ್ಮಿಕ ನಂಬಿಕೆಗಳನ್ನು ಗೌರವಿಸುವುದು ಮತ್ತು ಪ್ರತಿಯೊಬ್ಬ ವ್ಯಕ್ತಿಯ ನಂಬಿಕೆಯನ್ನು ಅನುಸರಿಸುವ ಹಕ್ಕನ್ನು ಗೌರವಿಸುವುದು. ಧರ್ಮವು ವೈಯಕ್ತಿಕ ಆಯ್ಕೆಯಾಗಿದ್ದು,  ರಾಜಕೀಯ ಲಾಭಕ್ಕಾಗಿ ಪರಿವರ್ತನೆ ಮಾಡಿಕೊಳ್ಳುವ ರಾಜಕೀಯ ಸಾಧವಾಗಬಾರದು. ಹಾಗೆ ಮಾಡಲು ಆಹ್ವಾನವಿದ್ದರೂ ಸಹ ಸೀತಾರಾಂ ಯೆಚೂರಿಯವರು ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಟ್ವಿಟ್ಟರ್ ನಲ್ಲಿ ತಿಳಿಸಿದೆ. 

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಯೆಚೂರಿ ಅವರಿಗೆ ಆಹ್ವಾನ ಬಂದಿದೆ ಎಂದು ಎಡಪಕ್ಷದ ಪಾಲಿಟ್ ಬ್ಯೂರೋ ಹೇಳಿಕೆಯಲ್ಲಿ ತಿಳಿಸಿದೆ.

ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಧಾರ್ಮಿಕ ಸಮಾರಂಭವನ್ನು ಪ್ರಧಾನ ಮಂತ್ರಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಮತ್ತು ಇತರರನ್ನು ನೇರವಾಗಿ ಒಳಗೊಂಡ ರಾಜ್ಯ ಪ್ರಾಯೋಜಿತ ಕಾರ್ಯಕ್ರಮವಾಗಿ ಪರಿವರ್ತಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಅದು ಟೀಕಿಸಿದೆ. 

ಸುಪ್ರೀಂ ಕೋರ್ಟ್ ಪುನರುಚ್ಚರಿಸಿದ ಭಾರತದಲ್ಲಿನ ಆಡಳಿತದ ಮೂಲಭೂತ ತತ್ವವೆಂದರೆ, ಸಂವಿಧಾನದ ಅಡಿಯಲ್ಲಿ ಭಾರತದಲ್ಲಿನ ರಾಜ್ಯವು ಯಾವುದೇ ಧಾರ್ಮಿಕ ಸಂಬಂಧವನ್ನು ಹೊಂದಿರಬಾರದು. ಇದನ್ನು ಆಡಳಿತವು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದೆ.

ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಂಥ ಗಣ್ಯರು ಭಾಗವಹಿಸಲಿದ್ದು, 6,000 ಕ್ಕೂ ಹೆಚ್ಚು ಜನರು ಭವ್ಯವಾದ "ಪ್ರಾಣ ಪ್ರತಿಷ್ಠಾ" ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT