ಪ್ರತ್ಯೇಕ ಸರ್ನಾ ಧರ್ಮಕ್ಕಾಗಿ ಆದಿವಾಸಿಗಳ ಹೋರಾಟ 
ದೇಶ

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಡಿ.30 ರಂದು ಭಾರತ್ ಬಂದ್ ಗೆ ಕರೆ

ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗೆಲ್ ಅಭಿಯಾನ್(ಎಎಸ್‌ಎ) ತನ್ನ ದೀರ್ಘಕಾಲದ ಬೇಡಿಕೆಯಾದ ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 30 ರಂದು "ಸಾಂಕೇತಿಕ" ಭಾರತ್ ಬಂದ್‌ಗೆ ಬುಧವಾರ ಕರೆ ನೀಡಿದೆ.

ಜೆಮ್‌ಶೆಡ್‌ಪುರ: ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗೆಲ್ ಅಭಿಯಾನ್(ಎಎಸ್‌ಎ) ತನ್ನ ದೀರ್ಘಕಾಲದ ಬೇಡಿಕೆಯಾದ ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 30 ರಂದು "ಸಾಂಕೇತಿಕ" ಭಾರತ್ ಬಂದ್‌ಗೆ ಬುಧವಾರ ಕರೆ ನೀಡಿದೆ.

ಎಎಸ್‌ಎ ಅಧ್ಯಕ್ಷ ಸಲ್ಖಾನ್ ಮುರ್ಮು ಮಾತನಾಡಿ, ಸರ್ನಾ ಧರ್ಮ ಸಂಹಿತೆಯು ದೇಶದ 15 ಕೋಟಿ ಬುಡಕಟ್ಟು ಜನಾಂಗದವರ ಗುರುತಾಗಿದೆ ಮತ್ತು ಬುಡಕಟ್ಟು ಸಮುದಾಯದ ಧರ್ಮಕ್ಕೆ ಮಾನ್ಯತೆ ನಿರಾಕರಿಸುವುದು "ಸಾಂವಿಧಾನಿಕ ಅಪರಾಧಕ್ಕೆ ಸಮಾನ" ಎಂದಿದ್ದಾರೆ.

ಇತರ ಧರ್ಮಗಳನ್ನು ಅಳವಡಿಸಿಕೊಳ್ಳುವಂತೆ ನಮ್ಮ ಸಮುದಾಯವನ್ನು ಒತ್ತಾಯಿಸುವುದು "ಧರ್ಮದ ಗುಲಾಮಗಿರಿ ಒಪ್ಪಿಕೊಳ್ಳುವಂತೆ ಒತ್ತಾಯಿಸಿದಂತೆ" ಎಂದು ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಬುಡಕಟ್ಟು ಜನಾಂಗದವರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿವೆ ಎಂದು ಆರೋಪಿಸಿದ್ದಾರೆ.

1951 ರ ಜನಗಣತಿಯು ಸರ್ನಾ ಧರ್ಮಕ್ಕೆ ಪ್ರತ್ಯೇಕ ಕೋಡ್ ಅನ್ನು ನೀಡಿತ್ತು. ಆದರೆ ನಂತರ ಕಾಂಗ್ರೆಸ್ ಅದನ್ನು ತೆಗೆದುಹಾಕಿತು ಎಂದು ಮುರ್ಮು, ಈಗ ಬಿಜೆಪಿ ಆದಿವಾಸಿಗಳನ್ನು ಹಿಂದೂಗಳಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಎಎಸ್‌ಎ ಬುಡಕಟ್ಟು ಸಮುದಾಯದ ಹಿತಾಸಕ್ತಿ ಕಾಪಾಡುವ ಪರವಾಗಿದೆ. ಯಾವ ಪಕ್ಷ ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುತ್ತದಯೋ ಆ ಪಕ್ಷಕ್ಕೆ ನಾವು ಮತ ಹಾಕುತ್ತೇವೆ ಎಂದು ಮುರ್ಮು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT