ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಒಟ್ಟಾರೆ 109 JN1 ಪ್ರಕರಣ ಪತ್ತೆ; ಇಂದು 529 ಜನರಿಗೆ ಕೊರೋನಾ ಪಾಸಿಟಿವ್, ಮೂವರು ಸಾವು

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 529 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 529 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 529 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ  4,50,10,189 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,093ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,340ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ  4,44,72,756ಕ್ಕೆ ತಲುಪಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಓಮಿಕ್ರಾನ್ ಉಪತಳಿ JN.1 ವೈರಸ್: ದೇಶದಲ್ಲಿ ಒಂದೇ ದಿನ 108 ಕೇಸ್ ಪತ್ತೆ
ಈ ನಡುವೆ ಮಹಾಮಾರಿ ಕೊರೋನಾ ವೈರಸ್​ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದೆ.

ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ ಹೆಚ್ಚಾಗತೊಡಗಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 109 ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ದೇಶದ ಒಟ್ಟು 8 ರಾಜ್ಯಗಳಲ್ಲಿ (ಗೋವಾ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಗುಜರಾತ್, ರಾಜಸ್ಥಾನ್) ರೂಪಾಂತರಿ ವೈರಸ್ JN.1 ಪತ್ತೆಯಾಗಿದ್ದು, ಈ ಪೈಕಿ ಗುಜರಾತ್ ರಾಜ್ಯದಲ್ಲಿ ಅತೀ ಹೆಚ್ಚು 36 ಪ್ರಕರಣಗಳು ಪತ್ತೆಯಾಗಿವೆ.

ಉಳಿದಂತೆ ಕರ್ನಾಟಕದಲ್ಲಿ 34, ಗೋವಾ 14, ಮಹಾರಾಷ್ಟ್ರ 9, ಕೇರಳ 6, ರಾಜಸ್ಥಾನ4, ತಮಿಳುನಾಡು 4 ಮತ್ತು ತೆಲಂಗಾಣದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT