ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ 
ದೇಶ

ಗಣರಾಜ್ಯೋತ್ಸವ ಪರೇಡ್‌ಗೆ ಪಂಜಾಬ್‌ನ ಟ್ಯಾಬ್ಲೋ ಸೇರಿಸದ ಕೇಂದ್ರದ ವಿರುದ್ಧ ಸಿಎಂ ಮಾನ್ ವಾಗ್ದಾಳಿ

ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ತಾರತಮ್ಯ ಮಾಡಿದೆ...

ಚಂಡೀಗಢ: ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ತಾರತಮ್ಯ ಮಾಡಿದೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷದಂತೆ ಈ ವರ್ಷವೂ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಪಂಜಾಬ್‌ನ ಟ್ಯಾಬ್ಲೋವನ್ನು ಸೇರಿಸಿಲ್ಲ ಎಂದು ಭಗವಂತ್ ಮಾನ್ ಹೇಳಿದ್ದಾರೆ.

"ಕೇಂದ್ರ ಸರ್ಕಾರ ಪಂಜಾಬ್ ವಿಚಾರದಲ್ಲಿ ತಾರತಮ್ಯ ಮಾಡಿದೆ" ಎಂದು ಆರೋಪಿಸಿದ ಮಾನ್, ಪಂಜಾಬ್ ಮತ್ತು ದೆಹಲಿ ಎರಡೂ ಆಯ್ಕೆ ಮಾಡಿದ ಪಟ್ಟಿಯಲ್ಲಿಲ್ಲ ಎಂದಿದ್ದಾರೆ.

ಫತೇಘರ್ ಸಾಹಿಬ್‌ಗೆ ಭೇಟಿ ನೀಡಿದ ನಂತರ ಚಂಡೀಗಢದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾನ್, ನನಗೆ ಇಂದು ಕೇಂದ್ರದಿಂದ ಪತ್ರ ಬಂದಿದ್ದು, ಪಂಜಾಬ್‌ನ ಟ್ಯಾಬ್ಲೋವನ್ನು ಸೇರಿಸಲಾಗಿಲ್ಲ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ನಿರಾಕರಣೆಗೆ ಕಾರಣವನ್ನು ಕೇಳಿದಾಗ, ಟ್ಯಾಬ್ಲೋ ಅನ್ನು ಆಯ್ಕೆ ಮಾಡಿದ ರಾಜ್ಯಗಳ ಪಟ್ಟಿಯ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿದೆ ಎಂದು ಮಾನ್ ತಿಳಿಸಿದ್ದಾರೆ.

"ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ವಿವಿಧ ರಾಜ್ಯಗಳು ತಮ್ಮ ಟ್ಯಾಬ್ಲೋಗಳ ಮೂಲಕ ತಮ್ಮ ರಾಜ್ಯದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುತ್ತವೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT