ಸಾಂದರ್ಭಿಕ ಚಿತ್ರ 
ದೇಶ

ಅಮೆರಿಕದಲ್ಲಿ ಭೀಕರ ಅಪಘಾತ: ಆಂಧ್ರಪ್ರದೇಶ ಶಾಸಕನ 6 ಮಂದಿ ಸಂಬಂಧಿಕರ ಸಾವು

ಅಮೆರಿಕದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶ ಶಾಸಕರೊಬ್ಬರ 6 ಮಂದಿ ಸಂಬಂಧಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಅಮೆರಿಕದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶ ಶಾಸಕರೊಬ್ಬರ 6 ಮಂದಿ ಸಂಬಂಧಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಮೆರಿಕದ ಟೆಕ್ಸಾಸ್‌ನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶದ ವೈಎಸ್ಆರ್‌ಸಿಪಿ ಶಾಸಕ ಪಿ.ವೆಂಕಟ ಸತೀಶ್ ಕುಮಾರ್ ಅವರ ಆರು ಮಂದಿ ಸಂಬಂಧಿಕರು ಮೃತಪಟ್ಟಿದ್ದಾರೆ. ಮೃತರನ್ನು ಶಾಸಕರ ಚಿಕ್ಕಪ್ಪ ನಾಗೇಶ್ವರ ರಾವ್, ಸೀತಾ ಮಹಾಲಕ್ಷ್ಮಿ, ನವೀನ, ಕೃತಿಕ್ ಮತ್ತು ನಿಶಿತಾ ಎಂಬ ಯುವತಿ ಎಂದು ಗುರುತಿಸಲಾಗಿದೆ.

ಕ್ರಿಸ್ ಮಸ್ ಹಿನ್ನಲೆಯಲ್ಲಿ ಸ್ಥಳೀಯ ಮೃಗಾಲಯಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಟೆಕ್ಸಾಸ್‌ನ ಕ್ಲೆಬೂರ್ನ್ ನಗರದ ಜಾನ್ಸನ್ ಕೌಂಟಿಯಲ್ಲಿ ಎದುರಿನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಏಳು ಮಂದಿ ಪೈಕಿ ಆರು ಮಂದಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡ ಲೋಕೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಶಾಸಕ ವೆಂಕಟ ಸತೀಶ್ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಭಾರತಕ್ಕೆ ತರಲು ಉತ್ತರ ಅಮೆರಿಕದ ತೆಲುಗು ಅಸೋಸಿಯೇಷನ್ (ಟಿಎಎನ್ಎ) ಸಂಘಟನೆ ಸಹಾಯ ಮಾಡುತ್ತಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ಮುಮ್ಮಿಡಿವರಂ ಕ್ಷೇತ್ರದ ಶಾಸಕರಾದ ಸತೀಶ್ ಕುಮಾರ್, "ನಾವು ಮೃತದೇಹಗಳನ್ನು ದೇಶಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ... ಆದರೆ ಲೋಕೇಶ್ ಇನ್ನೂ ಚಿಕಿತ್ಸೆ ಪಡೆಯುತ್ತಿರುವುದರಿಂದ, ತಡವಾಗುತ್ತಿದೆ. ಶವಗಳ ಹಸ್ತಾಂತ್ರ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸತೀಶ್ ಕುಮಾರ್ ಹೇಳಿದರು.

ಟ್ರಕ್‌ನಲ್ಲಿದ್ದ ಇಬ್ಬರೂ ಗಾಯಗೊಂಡಿದ್ದು, ಟ್ರಕ್ ಚಾಲನೆ ಮಾಡುತ್ತಿದ್ದವರ ಅಚಾತುರ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT