ಸಾಂದರ್ಭಿಕ ಚಿತ್ರ 
ದೇಶ

ದಕ್ಷಿಣ ಭಾರತದ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ; ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ

ಮುಂಬರುವ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಭಾರತದ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ, 2024 ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು(MSP) ಹೆಚ್ಚಿಸಿದೆ.

ನವದೆಹಲಿ: ಮುಂಬರುವ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಭಾರತದ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ, 2024 ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು(MSP) ಹೆಚ್ಚಿಸಿದೆ. 

ಕೇರಳ ಮತ್ತು ತಮಿಳುನಾಡು ಮಿಲ್ಲಿಂಗ್ ಕೊಬ್ಬರಿಯ ಪ್ರಮುಖ ಉತ್ಪಾದಕ ರಾಜ್ಯಗಳಾಗಿವೆ. ಆದರೆ ಉಂಡೆ ಕೊಬ್ಬರಿಯನ್ನು ಕರ್ನಾಟಕದಲ್ಲಿ ಪ್ರಧಾನವಾಗಿ ಉತ್ಪಾದಿಸಲಾಗುತ್ತದೆ. 

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಅನುಮೋದನೆ ನೀಡಿದೆ.

ಮಿಲ್ಲಿಂಗ್ ಕೊಬ್ಬರಿಗೆ MSP ಯನ್ನು ಶೇ. 2.7 ರಷ್ಟು ಹೆಚ್ಚಳ ಮಾಡಿದ್ದು, ಉಂಡೆ ಕೊಬ್ಬರಿಗೆ ಶೇ. 2 ರಷ್ಟು ಹೆಚ್ಚಳ ಮಾಡಲಾಗಿದೆ. ಅಂದರೆ ಮಿಲ್ಲಿಂಗ್‌ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂ. ಹಾಗೂ ಉಂಡೆ ಕೊಬ್ಬರಿಯ ‘ಎಂಎಸ್‌ಪಿ’ಯನ್ನು ಕ್ವಿಂಟಾಲ್‌ಗೆ 250 ರೂ. ಏರಿಕೆ ಮಾಡಲಾಗಿದೆ.

ಇದರೊಂದಿಗೆ 2024ನೇ ಋುತುವಿಗೆ ಮಿಲ್ಲಿಂಗ್‌ ಕೊಬ್ಬರಿಯ ಕನಿಷ್ಠ ಬೆಲೆಯು ಕ್ವಿಂಟಾಲ್‌ಗೆ 11,160 ರೂ.ಗೆ ಹೆಚ್ಚಳಗೊಂಡಿದೆ. ಇದೇ ವೇಳೆ, ಉತ್ತಮ ಗುಣಮಟ್ಟದ ಉಂಡೆ ಕೊಬ್ಬರಿ ಬೆಲೆ 12,000 ರೂ.ಗೆ ಏರಿಕೆಯಾಗಿದೆ.

ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸುಗಳು ಹಾಗೂ ಅಧಿಕ ತೆಂಗು ಬೆಳೆಯುವ ರಾಜ್ಯಗಳ ಅಭಿಪ್ರಾಯಗಳನ್ನು ಆಧರಿಸಿ ಈ ಏರಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ್ದಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. ಕೊಬ್ಬರಿ ಬೆಲೆ ಕುಸಿತದಿಂದ ರಾಜ್ಯದ ತೆಂಗು ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ದೇವೇಗೌಡರು ಕಳೆದ ವಾರ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT